ತೀರ್ಥಹಳ್ಳಿ: ಮರದ ದಿಮ್ಮಿಗಳನ್ನು (Timber) ಮಣ್ಣಿನ ದಿಬ್ಬದಿಂದ ಕೆಳಗೆ ಉರುಳಿಸುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಸಮೀಪದ ಕೊಳವಾರ ಗ್ರಾಮದಲ್ಲಿ ಸೋಮವಾರ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ತಾಲೂಕಿನ ಸಕ್ರೆಬೈಲು ನಿವಾಸಿ ಎಸ್.ಟಿ.ಯೋಗೇಂದ್ರ ಗೌಡ (52) ಮೃತರು. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಲ್ವರು ಕಾರ್ಮಿಕರು ಅಕೇಶಿಯಾ ಮರದ ದಿಮ್ಮಿಗಳನ್ನು ದಿಬ್ಬದಿಂದ ಕೆಳಗಿಳಿಸುತ್ತಿದ್ದರು.

ಈ ವೇಳೆ ಯೋಗೇಂದ್ರ ಅವರು ಕಾಲು ಜಾರಿ ಕೆಳಗೆ ಬಿದ್ದಿದ್ದು, ದಿಮ್ಮಿಯೊಂದು ಅವರ ಮೇಲೆ ಉರುಳಿ ತಲೆಗೆ ಗಂಭೀರ ಗಾಯವಾಗಿದೆ. ಸ್ಥಳದಲ್ಲಿದ್ದವರು ತಕ್ಷಣ ಅವರನ್ನು ಜೆ.ಸಿ.ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗ ಮಧ್ಯೆ ಅವರು ಅಸುನೀಗಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬೈಕುಗಳು ಮುಖಾಮುಖಿ ಡಿಕ್ಕಿ, ಶಾಲೆ ಮುಖ್ಯೋಪಾಧ್ಯಾಯ ಸಾವು

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





