ಭದ್ರಾವತಿ: ಭದ್ರಾ ಜಲಾಶಯದ (Dam) ನಾಲ್ಕು ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಿ ನದಿಗೆ ನೀರು ಹರಿಸಲಾಗುತ್ತಿದೆ. ಇಂದು ಸಂಜೆ ಗೇಟ್ಗಳನ್ನು ಮೇಲೆತ್ತಲಾಗಿದೆ.
ಕ್ರಸ್ಟ್ ಗೇಟ್ಗಳ ಮೂಲಕ 3300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ ಒಳಹರಿವು ಇದೆ.

ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಭದ್ರಾ ಜಲಾಶಯವು ಗರಿಷ್ಠ 186 ಅಡಿ ನೀರಿನ ಸಂಗ್ರಹ ಮಟ್ಟ ಹೊಂದಿದೆ. ಸದ್ಯ 174 ಅಡಿಯಷ್ಟು ನೀರು ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಒಳಹರಿವು ಮತ್ತಷ್ಟು ಹೆಚ್ಚಳದ ನಿರೀಕ್ಷೆ ಇದೆ.
ಇದನ್ನೂ ಓದಿ » ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ



