ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ (snake) ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ ಆತ ಕೊನೆಯುಸಿರೆಳೆದಿದ್ದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ » ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು
ಆಗರದಹಳ್ಳಿ ಗ್ರಾಮದ ನಿಂಗರಾಜು (33) ಮೃತ ದುರ್ದೈವಿ. ಅಡಿಕೆ ತೋಟವೊಂದರಲ್ಲಿ ಕೆಲಸ ಮಾಡುವಾಗ ನಿಂಗರಾಜುಗೆ ಹಾವು ಕಚ್ಚಿತ್ತು. ಕೂಡಲೆ ಆತ ಕೂಗಿಕೊಂಡಿದ್ದ. ಅಲ್ಲೇ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ಆತನ ಮಾವ ಸ್ಥಳಕ್ಕೆ ಬಂದಿದ್ದು, ವಿಚಾರ ಗೊತ್ತಾಗಿದೆ.
ಕೂಡಲೆ ನಿಂಗರಾಜುನನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿತ್ತು. ಆ ಹೊತ್ತಿಗಾಗಲೆ ನಿಂಗರಾಜು ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ನಿಂಗರಾಜುಗೆ ತಂದೆ ರಂಗಪ್ಪ, ತಾಯಿ ವಿಜಯಲಕ್ಷ್ಮಿ ಇದ್ದಾರೆ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















