ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುವ ಭದ್ರಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಡೆಗೋಡೆ (retaining wall) ನಿರ್ಮಿಸಲು ₹50 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಲಸಂಪನ್ಮೂಲ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಕೆ. ಶುಭಾ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?
ಶಾಸಕರ ಕಚೇರಿ ಪ್ರಕಟಣೆಯ ಪ್ರಕಾರ, ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಈ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.

ತಡೆಗೋಡೆಗೆ ಸ್ಥಳೀಯರ ಒತ್ತಾಯವಿತ್ತು
ಭದ್ರಾ ನದಿಯು ನಗರದ ಹೃದಯ ಭಾಗದಲ್ಲಿ ಸುಮಾರು 3 ಕಿ.ಮೀ.ಗಳಷ್ಟು ಹರಿಯುತ್ತದೆ. ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದಾಗ, ನದಿಯ ಎಡ ಮತ್ತು ಬಲ ದಂಡೆಗಳಲ್ಲಿರುವ ಅಂಬೇಡ್ಕರ್ ಕಾಲೊನಿ, ಗೌಳಿಗರ ಬೀದಿ, ಚಾಮೇಗೌಡ ಏರಿಯಾ, ಗುಂಡೂರಾವ್ ಶೆಡ್, ಮತ್ತು ಯಕಿನ್ಸಾ ಕಾಲೊನಿಗಳ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯುಂಟಾಗುತ್ತಿತ್ತು. ಇದರಿಂದ ಸ್ಥಳೀಯ ನಿವಾಸಿಗಳು ನದಿಯ ಎರಡೂ ಬದಿಯಲ್ಲಿ ತಡೆಗೋಡೆ ನಿರ್ಮಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದರು.

ಎಲ್ಲೆಲ್ಲಿ ತಡೆಗೋಡೆ ನಿರ್ಮಾಣವಾಗುತ್ತೆ?
ಈ ಯೋಜನೆಯ ಅಡಿ ಗೌಳಿಗರ ಬೀದಿ ಮತ್ತು ಚಾಮೇಗೌಡ ಏರಿಯಾದಲ್ಲಿ ತಲಾ 400 ಮೀಟರ್, ಯಕಿನ್ಸಾ ಕಾಲೊನಿಯಲ್ಲಿ 125 ಮೀಟರ್ ಮತ್ತು ಗುಂಡೂರಾವ್ ಶೆಡ್ನಲ್ಲಿ 190 ಮೀಟರ್ ಸೇರಿದಂತೆ ಒಟ್ಟು 1,115 ಮೀಟರ್ ಉದ್ದದ ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ತಡೆಗೋಡೆ ನಿರ್ಮಾಣದಿಂದ ಈ ಪ್ರದೇಶಗಳ ನೂರಾರು ಕುಟುಂಬಗಳಿಗೆ ಪ್ರವಾಹದ ಭೀತಿಯಿಂದ ಮುಕ್ತಿ ಸಿಗಲಿದೆ.
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















