ಶಿವಮೊಗ್ಗ: ಮುಂಗಾರು ಬೆಳೆಗೆ ಭದ್ರಾ ಜಲಾಶಯದ ಬಲದಂಡೆ ನಾಲಗೆ (Canal) ಜುಲೈ 22ರಿಂದ 120 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಜು.22 ರಿಂದ ಬಲದಂಡೆ ನಾಲೆಗೆ 120 ದಿನ ನೀರು ಹರಿಸಲು ಸಭೆ ನಿರ್ಧರಿಸಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡು ನೀರು ಬಿಡಬೇಕು. ಎಡದಂಡ ನಾಲೆಯಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು. ಎಡದಂಡ ನಾಲೆಗೆ ನೀರು ಹರಿಸಲು ದಿನಾಂಕ ನಿಗದಿಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಗೆ ನೀರು ಹಂಚಿಕೆ ಕುರಿತು ನೀರಾವರಿ ಸಚಿವರೊಂದಿಗೆ ಸಭೆ ನಿಗದಿಪಡಿಸಿ ಚರ್ಚಿಸಬೇಕು. ಕಾಡಾ ವ್ಯಾಪ್ತಿಯಲ್ಲಿ 537 ನೀರು ಬಳಕೆದಾರರ ಸಂಘಗಳಿದ್ದು, ಇವುಗಳಿಗೆ ನೀರು ಬಳಕೆ, ಇತರೆ ರೈತ ಚಟುವಟಿಕೆ ಕುರಿತು ಕಾರ್ಯಾಗಾರ ಮಾಡಿದರೆ ಒಳಿತು.ಮಧು ಬಂಗಾರಪ್ಪ, ಸಚಿವ
ರೈತ ಪರ ಕಾಳಜಿ ವಹಿಸಿ ಕೊನೆ ಭಾಗದ ರೈತರಿಗೆ ನೀರು ತಲುಪಿಸಬೇಕು. ಅಕ್ರಮ ಪಂಪ್ ಸೆಟ್ ತೆರವು ಕಷ್ಟವಾಗಿದೆ. ಕೆರೆ ತುಂಬಿಸಲು, ಕುಡಿಯುವ ನೀರಿಗಾಗಿ ಭದ್ರಾ ನಾಲೆಯನ್ನು ಸೀಳುತ್ತಾ ಹೋಗುವುದು ಅಷ್ಟು ಸರಿಯಲ್ಲ. ನಾಲೆಗಳ ರಿಪೇರಿ ಹಾಗೂ ಹೂಳು ತೆಗೆಯಲು ಅನುದಾನ ನೀಡಬೇಕು.
ಸವಳು ಜವಳು ಯೋಜನೆ ಜಾರಿಗೆ ರೈತರ ಸಹಕಾರ ಅಗತ್ಯ. ಭೂಮಿಯ ಫಲವತ್ತತೆ, ಸುರಕ್ಷತೆ ಬಗ್ಗೆಯು ಕಾಡಾ ಕೆಲಸ ಮಾಡುತ್ತಿದೆ. ಕಾಡಾ ವ್ಯಾಪ್ತಿಯಲ್ಲಿ 35 ನೀರಾವರಿ ಯೋಜನೆಗಳು ಬರುತ್ತವೆ. ಒಟ್ಟು ಸಂಘಗಳ ಪೈಕಿ 110 ಸಂಘಗಳಿಗೆ ಸರ್ಕಾರ ₹1,00,000 ಅನುದಾನ ನೀಡಲಾಗಿದೆ. ನರೇಗಾ ಯೋಜನೆ ಅಡಿ ಕೆಲಸಕ್ಕೆ ಮುಂದಾಗಿದ್ದೇವೆ. ನೀರಾವರಿ ಸಮಸ್ಯೆ ಪರಿಹರಿಸಲು ಬದ್ದವಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ