ಶಿವಮೊಗ್ಗ: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ಜುಲೈ 23ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಲ್ಲಾಪುರದ ಗುಡ್ಡದಲ್ಲಿರುವ ದೇವಸ್ಥಾನದ ಸಾಭಾಂಗಣದಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂಟಪ, ಸಂಜೆ 5.30ಕ್ಕೆ ಭದ್ರಾವತಿ ಬಸ್ ನಿಲ್ದಾಣದ ಸಮೀಪ ಇರುವ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.
ಪಕ್ಷ ಸಂಘಟನೆಗಾಗಿ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಪ್ರತಿ ಕ್ಷೇತ್ರದಲ್ಲಿಯು ಕಾರ್ಯಕರ್ತರ ಜೊತೆಗೆ ಚರ್ಚೆ, ಪಕ್ಷ ಸಂಘಟನೆ ಮತ್ತು ಮಿಸ್ಡ್ ಕಾಲ್ ಅಭಿಯಾನ ನಡೆಸಲಾಗುತ್ತಿದೆ. ಶಿವಮೊಗ್ಗದ ಜಿಲ್ಲೆಯ ಕಾರ್ಯಕ್ರಮಗಳಿಗೆ ರಾಜ್ಯಮಟ್ಟದ ಅನೇಕ ನಾಯಕರು ಭಾಗವಹಿಸಲಿದ್ದಾರೆ.ಕಡಿದಾಳು ಗೋಪಾಲ್, ಜೆಡಿಎಸ್ ಜಿಲ್ಲಾಧ್ಯಕ್ಷ
ಎರಡು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಇದೇ ಕಾರಣಕ್ಕೆ ಜನ ಜೆಡಿಎಸ್ನತ್ತ ಮುಖ ಮಾಡುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ರಾಜಕೀಯ ಬೆಳವಣಿಗೆ, ನಾಗರಿಕರು ಅನುಭವಿಸುತ್ತಿರುವ ಕಷ್ಟಗಳ ಕುರಿತು ಮಾತನಾಡುತ್ತಿದ್ದಾರೆ. ಮಿಸ್ಡ್ ಕಾಲ್ ಅಭಿಯಾನದ ಮೂಲಕವು ಪಕ್ಷಕ್ಕೆ ಹೆಚ್ಚು ಜನರನ್ನು ಸಂಘಟಿಸಲಾಗುತ್ತಿದೆ.ಕೆ.ಬಿ.ಪ್ರಸನ್ನ ಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ
ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿ ನೇತೃತ್ವದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ನಡೆಯುವ ಮೂರು ಕಾರ್ಯಕ್ರಮಕ್ಕೆ ಹೆಚ್ಚಿನ ಯುವಕರು ಆಗಮಿಸಲಿದ್ದಾರೆ.ಮಧುಕುಮಾರ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ
ಸುದ್ದಿಗೋಷ್ಠಿಯಲ್ಲಿ ಪ್ರಮಖರಾದ ದೀಪಕ್ ಸಿಂಗ್, ರಾಮಕೃಷ್ಣ, ತ್ಯಾಗರಾಜ್, ಸಂಗಯ್ಯ, ಗೀತಾ ಸತೀಶ್, ಅಬ್ದುಲ್ ವಾಜಿದ್ ಸೇರಿದಂತೆ ಹಲವರು ಇದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ