ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಪಾರ್ಕ್ನಲ್ಲಿ (Park) ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಭದ್ರತಾ ಸಿಬ್ಬಂದಿಯ ಮೇಲೆ ಯುವಕರಿಬ್ಬರು ಹಲ್ಲೆ ನಡೆಸಿದ್ದಾರೆ. ಸೊರಬದ ಬೀಳಗಿಯ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನಡುರಾತ್ರಿ ಬಂದೂಕು ಹಿಡಿದು ಪೊಲೀಸರ ಕಾಲ್ನಡಿಗೆ ಗಸ್ತು, ಆಗಂತುಕರಿಗೆ ಮುಂದುವರೆದ ಶೋಧ
ಭದ್ರತಾ ಸಿಬ್ಬಂದಿ ಲೋಕೇಶ್ ಮೇಲೆ ಹಲ್ಲೆಯಾಗಿದೆ. ಪಾರ್ಕ್ನಲ್ಲಿ ಇಬ್ಬರು ಯುವಕರು, ಇಬ್ಬರು ಯುವತಿಯರು ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಲೋಕೇಶ್ ಪ್ರಶ್ನಿಸಿದ್ದರು. ಅಲ್ಲದೆ ತಮ್ಮ ಮೇಲಧಿಕಾರಿಗಳಿಗೆ ತಿಳಿಸುವುದಾಗಿ ಮೊಬೈಲ್ ತೆಗೆದಿದ್ದಾರೆ.

ಈ ವೇಳೆ ಇಬ್ಬರು ಯುವಕರು ಭದ್ರತಾ ಸಿಬ್ಬಂದಿ ಲೋಕೇಶ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಡಿ.ಆರ್.ಎಫ್.ಓ ಅವರು ಸ್ಥಳಕ್ಕೆ ಬಂದು ಗಲಾಟೆ ಬಿಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















