ಸಿಗಂದೂರು ದೇಗುಲದ ಭಕ್ತರಿಗೆ ಗುಡ್‌ ನ್ಯೂಸ್‌, ಇನ್ಮುಂದೆ ದರ್ಶನದ ಸಮಯ ಹೆಚ್ಚಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಸಿಗಂದೂರು ಸೇತುವೆ (Sigandur) ಲೋಕಾರ್ಪಣೆ ಬೆನ್ನಿಗೆ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗಿದೆ. ದೇವಿಯ ದರ್ಶನಕ್ಕೆ ಅನುಕೂಲವಾಗಲಿ ಎಂದು ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ

ಸಿಗಂದೂರು ದೇವಿ ದರ್ಶನದ ಅವಧಿಯನ್ನು ಒಂದೂವರೆ ಗಂಟೆ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ.

ದರ್ಶನದ ಸಮಯ ಏನು?

ಈಗ ರಾತ್ರಿ 9 ಗಂಟೆವರೆಗು ಸಿಗಂದೂರು ದೇವಿ ದರ್ಶನ ಪಡೆಯಬಹುದಾಗಿದೆ. ಸಿಗಂದೂರು ದೇಗುಲದ ಆಡಳಿತ ಮಂಡಳಿ ಸಮಯ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಕುರಿತು ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್‌ ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿದ್ದಾರೆ.

[su_quote cite=”ರವಿಕುಮಾರ್‌, ಸಿಗಂದೂರು ದೇಗುಲದ ಕಾರ್ಯದರ್ಶಿ“]ಸಿಗಂದೂರು ದೇವಿಯ ದರ್ಶನಕ್ಕೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ದರ್ಶನವಿರಲಿದೆ. ಈ ಮೊದಲು ರಾತ್ರಿ 7.30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಇನ್ನು, ಭಕ್ತರಿಗೆ ಮೂರು ಹೊತ್ತಿನ ಪ್ರಸಾದ ಇರಲಿದೆ.[/su_quote]

Siganduru-Temple-Sagara

ಸಮಯ ವಿಸ್ತರಣೆಗೆ ಕಾರಣವೇನು?

POINT-1ಸಿಗಂದೂರು ದೇಗುಲಕ್ಕೆ ಬರುವ ಭಕ್ತರು ಈ ಮೊದಲು ಲಾಂಚ್‌ ಮೂಲಕ ಶರಾವತಿ ಹಿನ್ನೀರು ದಾಟಬೇಕಿತ್ತು. ಸಂಜೆ 6 ಗಂಟೆವರೆಗೆ ಲಾಂಚ್‌ ವ್ಯವಸ್ಥೆ ಇರುತಿತ್ತು. ಭಾನುವಾರ ಅಥವಾ ವಿಶೇಷ ಸಂದರ್ಭ ಮಾತ್ರ ಲಾಂಚ್‌ ಸೇವೆ ಸ್ವಲ್ಪ ಹೆಚ್ಚಿನ ಹೊತ್ತು ಇರುತಿತ್ತು.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

POINT-2ತಡರಾತ್ರಿ ಬಂದ ಭಕ್ತರಿಗೆ ಸಿಗಂದೂರಿನಲ್ಲಿ ತಂಗಲು ಸಮಸ್ಯೆಯಾಗುತಿತ್ತು. ಸ್ವಂತ ವಾಹನದಲ್ಲಿ ಬಂದವರು ಸುತ್ತಿ ಬಳಸಿ ಸಾಗರ ತಲುಪಬಹುದಾಗಿತ್ತು. ಈ ಹಿನ್ನೆಲೆ ದೇವಿಯ ದರ್ಶನದ ಅವಧಿಯನ್ನು ರಾತ್ರಿ 7.30ರವರೆಗೆ ನಿಗದಿಪಡಿಸಲಾಗಿತ್ತು.

June-2025-Report-Shivamogga-Live-New-New.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

POINT-3ಸಿಗಂದೂರು ಸೇತುವೆ ಲೋಕಾರ್ಪಣೆ ಆದ ಬಳಿಕ ದೇಗುಲಕ್ಕೆ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ಅಲ್ಲದೆ ರಾತ್ರಿ ಬಹು ಹೊತ್ತಿನವರೆಗೆ ದೇಗುಲಕ್ಕೆ ಬಂದು ದರ್ಶನ ಪಡೆಯಲು ಅವಕಾಶವಾಗಿದೆ. ಇದೇ ಕಾರಣಕ್ಕೆ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ. ರಾತ್ರಿ 9.30ರವರೆಗೆ ಭಕ್ತರು ದರ್ಶನ ಪಡೆಯಬಹುದಾಗಿದೆ.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

ಸಿಗಂದೂರು ‍ಶ್ರೀ ಚೌಡೇಶ್ವರಿ ದೇವಿ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ. ರಜೆ ದಿನಗಳು, ವಿಶೇಷ ಸಂದರ್ಭದಲ್ಲಿ ಇಲ್ಲಿ ಭಕ್ತರು ದ್ವಿಗುಣಗೊಳ್ಳುತ್ತಿದ್ದರು. ಸೇತುವೆ ಲೋಕಾರ್ಪಣೆ ಬಳಿಕ ಭಕ್ತರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment