‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಜಿಲ್ಲೆಯ 35 ಸಾವಿರ ರೈತರನ್ನು (Farmers) ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗುತ್ತಿದೆ. ಆದರೆ ಸಂಸದರು, ಶಾಸಕರು ಮೌನ ವಹಿಸಿದ್ದಾರೆ. ಸದನದಲ್ಲಿ ಚರ್ಚೆ ನಡೆಸಿ ರೈತರಿಗೆ ನ್ಯಾಯ ಒದಗಿಸದೆ ಇದ್ದರೆ ಹೋರಾಟ ನಡೆಸಲಾಗುತ್ತದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಎಚ್ಚರಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ ಭಾಗದ ಸಾವಿರಾರು ರೈತರಿಗೆ ನೊಟೀಸ್ ನೀಡಲಾಗಿದೆ. ಉಳಿದ ಭಾಗದ ರೈತರಿಗೆ ನೊಟೀಸ್ ನೀಡಲು ಸಿದ್ಧತೆಯಾಗುತ್ತಿದೆ ಎಂದರು

ರೈತರಿಗೆ ಗೊಬ್ಬರ ವಿತರಣೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ. ಆದರೆ ಶಿಕಾರಿಪುರದಲ್ಲೆ ಸಾವಿರಾರು ರೈತರಿಗೆ ನೊಟೀಸ್ ನೀಡಿದರು ಧ್ವನಿ ಎತ್ತುತ್ತಿಲ್ಲ. ತೀ.ನಾ.ಶ್ರೀನಿವಾಸ್, ಸಂಚಾಲಕ, ಮಲೆನಾಡು ರೈತ ಹೋರಾಟ ಸಮಿತಿ

This.na.srinivas press meet in favour of farmers

ಬಗರ್‌ಹುಕುಂ ಸಾಗುವಳಿದಾರರು, ಭೂ ಹಕ್ಕಿಗಾಗಿ ಸೈಕಲ್ ಏರಿ ಯಡಿಯೂರಪ್ಪ ಹೋರಾಟ ಮಾಡಿದ್ದರು. ಆದರೆ ಅವರ ಮಕ್ಕಳು ರೈತ ಪರ ಹೋರಾಟ ಮಾಡುತ್ತಿಲ್ಲ. ಬಂಗಾರಪ್ಪ ಅವರು ಭೂ ಹಕ್ಕಿಗಾಗಿ ರಾಜ್ಯದಲ್ಲಿ ಧ್ವನಿ ಎತ್ತಿದ್ದರು. ಆದರೆ ಅವರದ್ದೇ ಮನೆ ಸಮೀಪದ ರೈತರಿಗೆ ನೊಟೀಸ್ ನೀಡಿದ್ದರು ಉಸ್ತುವಾರಿ ಸಚಿವರು ಉತ್ತರ ನೀಡುತ್ತಿಲ್ಲ ಎಂದು ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಬ್ರಿಟೀಷರು, ರಾಜರ ಕಾಲದಲ್ಲಿ ಅರಣ್ಯ ಎಂದು ಘೋಷಿಸಲಾಗಿದೆ ಎಂದು ಈಗ ರೈತರನ್ನು ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗುತ್ತಿದೆ. ಇಂತಹ ಕಾನೂನು ರೂಪಿಸಿದ ಈಗಿನ ಸಂಸದ, ಶಾಸಕರು ಬ್ರಿಟೀಷರು, ರಾಜರ ಸಂತತಿನಾ?ತೀ.ನಾ.ಶ್ರೀನಿವಾಸ್, ಸಂಚಾಲಕ, ಮಲೆನಾಡು ರೈತ ಹೋರಾಟ ಸಮಿತಿ

ಶಿಕಾರಿಪುರ ತಾಲೂಕು ಅಂಜನಾಪುರ ಹೋಬಳಿಯ ಕಲ್ಮನೆಯ 63ಕ್ಕೂ ಹೆಚ್ಚು ರೈತರನ್ನು ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಆದೇಶಿಸಿವೆ ಎಂದು ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ರೈತರ ಹಿತ ಕಾಯುವಂತೆಯು ಕೋರ್ಟುಗಳು ಹೇಳಿವೆ. ಆದರೆ ಸರ್ಕಾರಗಳು ಅದನ್ನು ಎಂದೂ ಜಾರಿಗೊಳಿಸಿಲ್ಲ. ಕೋರ್ಟುಗಳೆ ರಾಜ್ಯವನ್ನು ಆಳುವುದಾದರೆ ಸರ್ಕಾರ ಏಕೆ ಬೇಕು ಎಂದು ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದರು.

June-2025-Report-Shivamogga-Live-New-New.

ಸುದ್ದಿಗೋಷ್ಠಿಯಲ್ಲಿ ಶಿಕಾರಿಪುರದ ಕಲ್ಮನೆಯ ಕೊಟ್ರೇಶ್, ಈರಪ್ಪ, ಶಿವಮಾದಯ್ಯ, ಮಂಜುನಾಥ್, ಶ್ರೀನಿವಾಸ ಸೇರಿ ಹಲವರು ಇದ್ದರು.

Thi.Na.Srinivas angry against notices being served to farmers

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment