‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ 35 ಸಾವಿರ ರೈತರನ್ನು (Farmers) ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗುತ್ತಿದೆ. ಆದರೆ ಸಂಸದರು, ಶಾಸಕರು ಮೌನ ವಹಿಸಿದ್ದಾರೆ. ಸದನದಲ್ಲಿ ಚರ್ಚೆ ನಡೆಸಿ ರೈತರಿಗೆ ನ್ಯಾಯ ಒದಗಿಸದೆ ಇದ್ದರೆ ಹೋರಾಟ ನಡೆಸಲಾಗುತ್ತದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ.ಶ್ರೀನಿವಾಸ್ ಎಚ್ಚರಿಸಿದರು.

ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್‌

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ತೀರ್ಥಹಳ್ಳಿ ಭಾಗದ ಸಾವಿರಾರು ರೈತರಿಗೆ ನೊಟೀಸ್ ನೀಡಲಾಗಿದೆ. ಉಳಿದ ಭಾಗದ ರೈತರಿಗೆ ನೊಟೀಸ್ ನೀಡಲು ಸಿದ್ಧತೆಯಾಗುತ್ತಿದೆ ಎಂದರು

ರೈತರಿಗೆ ಗೊಬ್ಬರ ವಿತರಣೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ. ಆದರೆ ಶಿಕಾರಿಪುರದಲ್ಲೆ ಸಾವಿರಾರು ರೈತರಿಗೆ ನೊಟೀಸ್ ನೀಡಿದರು ಧ್ವನಿ ಎತ್ತುತ್ತಿಲ್ಲ. ತೀ.ನಾ.ಶ್ರೀನಿವಾಸ್, ಸಂಚಾಲಕ, ಮಲೆನಾಡು ರೈತ ಹೋರಾಟ ಸಮಿತಿ

This.na.srinivas press meet in favour of farmers

ಬಗರ್‌ಹುಕುಂ ಸಾಗುವಳಿದಾರರು, ಭೂ ಹಕ್ಕಿಗಾಗಿ ಸೈಕಲ್ ಏರಿ ಯಡಿಯೂರಪ್ಪ ಹೋರಾಟ ಮಾಡಿದ್ದರು. ಆದರೆ ಅವರ ಮಕ್ಕಳು ರೈತ ಪರ ಹೋರಾಟ ಮಾಡುತ್ತಿಲ್ಲ. ಬಂಗಾರಪ್ಪ ಅವರು ಭೂ ಹಕ್ಕಿಗಾಗಿ ರಾಜ್ಯದಲ್ಲಿ ಧ್ವನಿ ಎತ್ತಿದ್ದರು. ಆದರೆ ಅವರದ್ದೇ ಮನೆ ಸಮೀಪದ ರೈತರಿಗೆ ನೊಟೀಸ್ ನೀಡಿದ್ದರು ಉಸ್ತುವಾರಿ ಸಚಿವರು ಉತ್ತರ ನೀಡುತ್ತಿಲ್ಲ ಎಂದು ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಬ್ರಿಟೀಷರು, ರಾಜರ ಕಾಲದಲ್ಲಿ ಅರಣ್ಯ ಎಂದು ಘೋಷಿಸಲಾಗಿದೆ ಎಂದು ಈಗ ರೈತರನ್ನು ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗುತ್ತಿದೆ. ಇಂತಹ ಕಾನೂನು ರೂಪಿಸಿದ ಈಗಿನ ಸಂಸದ, ಶಾಸಕರು ಬ್ರಿಟೀಷರು, ರಾಜರ ಸಂತತಿನಾ?ತೀ.ನಾ.ಶ್ರೀನಿವಾಸ್, ಸಂಚಾಲಕ, ಮಲೆನಾಡು ರೈತ ಹೋರಾಟ ಸಮಿತಿ

ಶಿಕಾರಿಪುರ ತಾಲೂಕು ಅಂಜನಾಪುರ ಹೋಬಳಿಯ ಕಲ್ಮನೆಯ 63ಕ್ಕೂ ಹೆಚ್ಚು ರೈತರನ್ನು ಒಕ್ಕಲೆಬ್ಬಿಸಲು ನೊಟೀಸ್ ನೀಡಲಾಗಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಆದೇಶಿಸಿವೆ ಎಂದು ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ರೈತರ ಹಿತ ಕಾಯುವಂತೆಯು ಕೋರ್ಟುಗಳು ಹೇಳಿವೆ. ಆದರೆ ಸರ್ಕಾರಗಳು ಅದನ್ನು ಎಂದೂ ಜಾರಿಗೊಳಿಸಿಲ್ಲ. ಕೋರ್ಟುಗಳೆ ರಾಜ್ಯವನ್ನು ಆಳುವುದಾದರೆ ಸರ್ಕಾರ ಏಕೆ ಬೇಕು ಎಂದು ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದರು.

June-2025-Report-Shivamogga-Live-New-New.

ಸುದ್ದಿಗೋಷ್ಠಿಯಲ್ಲಿ ಶಿಕಾರಿಪುರದ ಕಲ್ಮನೆಯ ಕೊಟ್ರೇಶ್, ಈರಪ್ಪ, ಶಿವಮಾದಯ್ಯ, ಮಂಜುನಾಥ್, ಶ್ರೀನಿವಾಸ ಸೇರಿ ಹಲವರು ಇದ್ದರು.

Thi.Na.Srinivas angry against notices being served to farmers

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment