ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಂಕರಘಟ್ಟ: ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ‍್ಯಾಂಕಿಂಗ್‌ನಲ್ಲಿ (Ranking) ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿ ರ‍್ಯಾಂಕಿಂಗ್‌ ನೀಡಲಾಗಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 ಅಂಕ ಹಾಗೂ ವೈವಿಧ್ಯತೆ ಚಟುವಟಿಕೆಗಳಿಗೆ 100 ಅಂಕಗಳನ್ನು ನಿಗದಿಗೊಳಿಸಲಾಗಿತ್ತು.

200125 Kuvempu University and Vice chancellor Prof Sharat ananthamurthy

ಇದನ್ನೂ ಓದಿ » ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ಕುವೆಂಪು ವಿವಿ ಒಟ್ಟು 862.25 ಅಂಕಗಳೊಂದಿಗೆ 30ನೇ ಸ್ಥಾನ ಪಡೆದಿದೆ. ಉಳಿದಂತೆ ಕರ್ನಾಟಕದ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ 6ನೇ ಸ್ಥಾನ ಪಡೆದಿದ್ದರೆ, ಮೈಸೂರು ವಿವಿ 8ನೇ ಸ್ಥಾನ ಮತ್ತು ಬೆಂಗಳೂರು ವಿವಿ 24ನೇ ಸ್ಥಾನ ಮತ್ತು ಮಂಗಳೂರು ವಿವಿ 44ನೇ ಸ್ಥಾನ ಪಡೆದು, ದೇಶದ ಟಾಪ್ 50ರೊಳಗೆ ಸ್ಥಾನ ಪಡೆದಿವೆ.

ಕುವೆಂಪು ವಿಶ್ವವಿದ್ಯಾಲಯವು ಕಳೆದ ತಿಂಗಳು ನ್ಯಾಕ್ ನಿಂದ ‘ಎ’ ಶ್ರೇಣಿ ಪಡೆದಿತ್ತು. ಈಗ ಔಟ್ ಲುಕ್- ಐಕೇರ್ ಸಂಸ್ಥೆ ರ‍್ಯಾಂಕಿಂಗ್‌ನಲ್ಲಿ 30ನೇ ಸ್ಥಾನ ಪಡೆದಿದೆ.

ಮಲೆನಾಡು ಭಾಗದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿರುವ ಕುವೆಂಪು ವಿವಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದನ್ನು ಈ ರ‍್ಯಾಂಕಿಂಗ್‌ ಮತ್ತೊಮ್ಮೆ ಸಾಬೀತು ಪಡಿಸಿದೆ.ಪ್ರೊ. ಶರತ್ ಅನಂತಮೂರ್ತಿ, ಕುಲಪತಿ

ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ

ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿ ಕೌನ್ಸಿಲಿಂಗ್ ಆ. 29 ಮತ್ತು 30ಕ್ಕೆ ನಿಗದಿಯಾಗಿದೆ. ವಿದ್ಯಾರ್ಥಿಗಳು ಆ. 22ರವರೆಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

Kuvempu University Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 20, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment