ಗಣಪತಿ ಹಬ್ಬದ ಚಂದಾ ವಿಚಾರವಾಗಿ ನಡುಬೀದಿಯಲ್ಲಿ ಗಲಾಟೆ, ಮೂವರ ವಿರುದ್ಧ ಕೇಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಗಣಪತಿ ಹಬ್ಬದ (Ganesha) ಚಂದಾ ಹಣದ ವಿಚಾರವಾಗಿ‌ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವರ್ಮ ಬೀದಿಯಲ್ಲಿ ಗಲಾಡೆ ಮಾಡುತ್ತಿದ್ದರು.

ನಾಗರಾಜ್‌, ಕೃಷ್ಣ ಮತ್ತು ಚಂದನ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ. ಗಣೇಶ ಹಬ್ಬದ ಚಂದಾ ಹಣದ ವಿಚಾರವಾಗಿ ನಡುರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಯುವಕರು ಪರಾರಿಯಾಗಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

ಮೂವರು ಯುವಕರನ್ನು ಹಿಡಿದು ವಿಚಾರಣೆ ಮಾಡಿದಾಗ ಗಲಾಟೆಗೆ ಕಾರಣ ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

altercation over Ganesha money collection

Leave a Comment