ಗಣಪತಿ ಹಬ್ಬದ ಚಂದಾ ವಿಚಾರವಾಗಿ ನಡುಬೀದಿಯಲ್ಲಿ ಗಲಾಟೆ, ಮೂವರ ವಿರುದ್ಧ ಕೇಸ್‌

ಶಿವಮೊಗ್ಗ: ಗಣಪತಿ ಹಬ್ಬದ (Ganesha) ಚಂದಾ ಹಣದ ವಿಚಾರವಾಗಿ‌ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವರ್ಮ ಬೀದಿಯಲ್ಲಿ ಗಲಾಡೆ ಮಾಡುತ್ತಿದ್ದರು.

ನಾಗರಾಜ್‌, ಕೃಷ್ಣ ಮತ್ತು ಚಂದನ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ. ಗಣೇಶ ಹಬ್ಬದ ಚಂದಾ ಹಣದ ವಿಚಾರವಾಗಿ ನಡುರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಯುವಕರು ಪರಾರಿಯಾಗಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ

ಮೂವರು ಯುವಕರನ್ನು ಹಿಡಿದು ವಿಚಾರಣೆ ಮಾಡಿದಾಗ ಗಲಾಟೆಗೆ ಕಾರಣ ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

altercation over Ganesha money collection

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 21, 2025 at 8:20 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 21, 2025

Leave a Comment