ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಂಚೆ ಇಲಾಖೆಯಿಂದ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ (Scholarship) ನೀಡಲು 6ನೇ ತರಗತಿಯಿಂದ 9ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2025ರ ವಾರ್ಷಿಕ ಪರೀಕ್ಷೆಯಲ್ಲಿ ಶೇ 60ರಷ್ಟು ಅಂಕ ಪಡೆದಿದ್ದು, ಅಂಚೆ ಚೀಟಿ ಸಂಗ್ರಹಣಾ ಠೇವಣಿ ಖಾತೆ ಹೊಂದಿರಬೇಕು.
ಕ್ಲಬ್ ಅಂಚೆ ಚೀಟಿ ಸಂಗ್ರಹಣಾ ಸದಸ್ಯತ್ವ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಅನುಸರಿಸುವ ವಿದ್ಯಾರ್ಥಿಗಳಿಗೆ ವಾರ್ಷಿಕ ₹6,000 ವಿದ್ಯಾರ್ಥಿವೇತನ ನೀಡಲಾಗುವುದು.
ಮೊದಲ ಹಂತದಲ್ಲಿ ಅಂಚೆ ಚೀಟಿ ಸಂಗ್ರಹಣಾ ರಸಪ್ರಶ್ನೆ ಸ್ಪರ್ಧೆಯ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಮುಂದಿನ ಹಂತದಲ್ಲಿ ಅಂಚೆ ಇಲಾಖೆ ನೀಡುವ ಅಂಚೆ ಚೀಟಿ ಸಂಗ್ರಹಣಾ ಯೋಜನೆಯಲ್ಲಿ ಸ್ಪರ್ಧಿಸಿ ಯಶಸ್ವಿಯಾದ ವಿದ್ಯಾರ್ಥಿಗಳನ್ನು ಎಸ್ಪಿಎಆರ್ಎಸ್ಹೆಚ್(ಸ್ಪರ್ಶ್) ಯೋಜನೆಯ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ » ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ, ಜಲಪಾತದ ಮುಂದೆ ಸೆಲ್ಫಿ, ಫೋಟೊಗೆ ಪೋಸ್
ಮಾಹಿತಿಗೆ www.indiapost.gov.in ಮತ್ತು www.karnatakapost.gov.in ಭೇಟಿ ನೀಡಬಹುದು ಎಂದು ಅಂಚೆ ವಿಭಾಗದ ಜಿಲ್ಲಾ ಅಧೀಕ್ಷಕ ಜಯರಾಮ ಶೆಟ್ಟಿ ತಿಳಿಸಿದ್ದಾರೆ.
Postal department Scholarship
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





