ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಮಹಾನಗರ ಪಾಲಿಕೆ ಅಧಿಕಾರಿ ಬಲೆಗೆ

ಶಿವಮೊಗ್ಗ: ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದ ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್‌ ಲೋಕಾಯುಕ್ತ ಬಲೆಗೆ (Trap) ಬಿದ್ದಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ನೆಹರು ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್‌ ವಾಣಿಜ್ಯ ಸಂಕೀರ್ಣದಲ್ಲಿರುವ ಆ‍ಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ₹10,000 ನಗದು ಮತ್ತು ಅಧಿಕಾರಿ ಎ.ಪಿ.ಶಶಿಧರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಏನಿದು ಪ್ರಕರಣ?

lokayukta trap on Shimoga Palike officer
ಶಶಿಧರ್‌

ಮೊಹಮ್ಮದ್‌ ಆಸಿಫ್‌ ಎಂಬುವವರು ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಖರೀದಿಸಿದ್ದ ನಿವೇಶನಕ್ಕೆ ಖಾತೆ ಮಾಡಿಕೊಡಲು ಶಶಿಧರ್‌ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರ ವಾಯ್ಸ್‌ ರೆಕಾರ್ಡ್‌ ಅನ್ನು ಮೊಹಮ್ಮದ್‌ ಆಸಿಫ್‌ ಲೋಕಾಯುಕ್ತರಿಗೆ ನೀಡಿದ್ದರು. ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ದೂರು ನೀಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

Nanjappa Hospital Advertisement

ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಮಂಜುನಾಥ ಚೌಧರಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಉಪಾ‍ಧ್ಯಕ್ಷ ಬಿ.ಪಿ.ಚಂದ್ರಶೇಖರ್‌, ಇನ್ಸ್‌ಪೆಕ್ಟರ್‌ ರುದ್ರೇಶ್‌.ಕೆ.ಪಿ, ಇನ್ಸ್‌ಪೆಕ್ಟರ್‌ಗಳಾದ ಗುರುರಾಜ್‌ ಮೈಲಾರ್‌, ವೀರಬಸಪ್ಪ ಎಲ್‌.ಕುಸಲಾಪುರ, ಸಿಬ್ಬಂದಿ ಯೋಗೇಶ್‌, ಮಂಜುನಾಥ್‌, ಟೀಕಪ್ಪ, ಸುರೇಂದ್ರ, ಪ್ರಶಾಂತ್‌ ಕುಮಾರ್‌, ದೇವರಾಜ್‌, ಪ್ರಕಾಶ್‌ ಬಾರಿಮರದ, ಅರುಣ್‌ ಕುಮಾರ್‌, ಆದರ್ಶ, ಚಂದ್ರಿಬಾಯಿ, ಪ್ರದೀಪ, ಗಂಗಾಧರ, ಆನಂದ, ಗೋಪಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ಧರೆಗುರುಳಿದ ಮರ, ತಪ್ಪಿತು ಅನಾಹುತ, ಲಕ್ಷ್ಮೀ ಟಾಕೀಸ್‌ ಬಳಿ ಟ್ರಾಫಿಕ್‌ ಜಾಮ್‌

Lokayukta Trap in Shimoga city 

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment