ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

ಶಿವಮೊಗ್ಗ: ಜಿಲ್ಲೆಯಲ್ಲಿ ಈವರೆಗು ಏನೇನಾಯ್ತು? ಇಲ್ಲಿದೆ ಸ್ಪೀಡ್‌ ನ್ಯೂಸ್‌. (Speed News)

ರೈತರಿಗೆ ನಿರಂತರ ಲಾಭ ಸಾಧ್ಯ

FATAFAT-NEWS-1ಶಿವಮೊಗ್ಗ: ಜಿಲ್ಲೆಯಲ್ಲಿ ರೈತ ಉತ್ಪಾದಕ ಕಂಪನಿಗಳ (ಎಫ್‌ಪಿ) ಸ್ಥಿತಿಗತಿ ಹಾಗೂ ಸಮಸ್ಯೆಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕಾರ್ಯಾಗಾರ ಉದ್ಘಾಟಿಸಿದರು.

ರೈತರು ಕೃಷಿಯನ್ನು ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮವಾಗಿ ಪರಿಗಣಿಸಿ ವ್ಯವಸ್ಥಿತವಾಗಿ ಮಾಡಿದಾಗ ಮಾತ್ರ ನಿರಂತರ ಲಾಭ ಪಡೆಯಲು ಸಾಧ್ಯ.ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ

ಚುನಾವಣೆಯ ಬಹಿಷ್ಕಾರದ ಎಚ್ಚರಿಕೆ

FATAFAT-NEWS-2ಶಿಕಾರಿಪುರ: ಪಟ್ಟಣದಲ್ಲಿ ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದರು. ಡಾ. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಒಳಮೀಸಲಾತಿಯು ಬಂಜಾರ ಸಮಾಜಕ್ಕೆ ಮರಣ ಶಾಸನ ವಾಗಿದೆ. ಈ ಹಿಂದೆ ಇದ್ದ ಮೀಸಲಾತಿ ಮುಂದುವರಿಸಬೇಕು. ಇಲ್ಲವಾದರೆ ರಾಜ್ಯ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುವುದಲ್ಲದೆ ಚುನಾವಣೆಯನ್ನು ಬಹಿಷ್ಕರಿಸುವುದು ಅನಿವಾರ್ಯ.ಸೇನಾಭಗತ್ ಸ್ವಾಮೀಜಿ, ಸಾಲೂರು ಬಂಜಾರ ಮಠ

ಗಣಪತಿ ಮೆರವಣಿಗೆ ವೇಳೆ ಜನರೇಟರ್‌ ಸ್ಪೋಟ

FATAFAT-NEWS-3ಸಾಗರ: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಳೆದ ರಾತ್ರಿ ಜನರೇಟರ್‌ ಸ್ಪೋಟಗೊಂಡು ಯುವಕನಿಗೆ ಗಾಯ. ಸಾಗರದ ಡಿಗಟೆಕೊಪ್ಪದಲ್ಲಿ ಘಟನೆ. ಲೋಕೇಶ್‌ ಎಂಬವವರು ಗಾಯಗೊಂಡಿದ್ದಾರೆ. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಭದ್ರಾವತಿ ಹೊಸ ಸೇತುವೆ ಮತ್ತೆ ಬಂದ್

FATAFAT-NEWS-4ಭದ್ರಾವತಿ: ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಟ್ಟಿದ್ದರಿಂದ ನಗರದ ಹೊಸ ಸೇತುವೆ ಮೇಲೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಈ ಮಳೆಗಾಲದಲ್ಲಿ ಮೂರನೇ ಬಾರಿ ಸೇತುವೆ ಬಂದ್‌ ಮಾಡಲಾಗಿದೆ. ‌

ಆನೆ ಕಂದಕಕ್ಕೆ ಬಿದ್ದು ವ್ಯಕ್ತಿ ಸಾವು

FATAFAT-NEWS-5ಶಿವಮೊಗ್ಗ: ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಟ್ರಂಚ್‌ಗೆ (Trench) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ತಮ್ಮಡಿಹಳ್ಳಿ ಸಮೀಪದ ಆಡಿನಕೊಟ್ಟಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದಿಂದ ಮನೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಗರಾಜ್‌ (32) ಎಂಬುವವರು ಮೃತಪಟ್ಟಿದ್ದಾರೆ.

Zee Kannada
ಜೀ ಕನ್ನಡದ ನಾವು ನಮ್ಮವರು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ದಂಪತಿ.

ತೋಟಕ್ಕೆ ತೆರಳುವಾಗ ಕರಡಿ ದಾಳಿ, ವ್ಯಕ್ತಿಗೆ ಗಾಯ

FATAFAT-NEWS-6ಭದ್ರಾವತಿ: ತೋಟಕ್ಕೆ ನಡೆದು ಹೋಗುತ್ತಿದ್ದ ವ್ಯಕ್ತಿ ಮೇಲೆ ಕರಡಿ (Bear) ದಾಳಿ ನಡೆಸಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭದ್ರಾವತಿ ತಾಲೂಕು ಮಾವಿನಕೆರೆ ಬಳಿ ಘಟನೆ ಸಂಭವಿಸಿದೆ. ಮಧುಸೂದನ್‌ (38) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸರ್ಕಾರಿ ಆಂಬುಲೆನ್ಸ್‌ ಚಾಲಕನಿಗೆ ₹10,000 ದಂಡ, ಕಾರಣವೇನು?

‘ಧರ್ಮಸ್ಥಳಕ್ಕೆ ಪಾದಯಾತ್ರೆ ಹಾಸ್ಯಾಸ್ಪದ’

FATAFAT-NEWS-7.ಶಿವಮೊಗ್ಗ: ಎಸ್‌ಐಟಿ ರಚನೆ ಮೂಲಕ ಧರ್ಮಸ್ಥಳಕ್ಕೆ ಹತ್ತಿದ್ದ ಕಳಂಕ ತೊಳೆಯುತ್ತಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಈಗ ಅಲ್ಲಿಗೆ ಪಾದಯಾತ್ರೆ ಹೊರಟಿದ್ದಾರೆ. ಅದು ಹಾಸ್ಯಾಸ್ಪದ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಇಲ್ಲಿ ರೈತರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸರ್ಕಾರವನ್ನು ಎಚ್ಚರಿಸಬೇಕಿದ್ದ ವಿರೋಧ ಪಕ್ಷದವರು ಬೇಜಬ್ದಾರಿಯಿಂದ ವರ್ತಿಸುತ್ತಿದ್ದಾರೆ.ಆಯನೂರು ಮಂಜುನಾಥ್‌, ಕೆಪಿಸಿಸಿ ವಕ್ತಾರ

ಧರ್ಮಸ್ಥಳ ಚಲೋಗೆ ಶಿವಮೊಗ್ಗದಿಂದ ನೂರಾರು ಜನ

FATAFAT-NEWS-8ಸಾಗರ: ‘ಧರ್ಮಸ್ಥಳ ರಕ್ಷಿಸಿ, ಹಿಂದೂ ಧರ್ಮ ಉಳಿಸಿ’ ಘೋಷವಾಕ್ಯದೊಂದಿಗೆ ಸೆ. 1ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಸ್ಥೈರ್ಯ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೋಮವಾರ ಬೆಳಿಗ್ಗೆ 10ಕ್ಕೆ ಸಾಗರದಿಂದ ಅಂದಾಜು 100 ವಾಹನಗಳಲ್ಲಿ 500ಕ್ಕೂ ಹೆಚ್ಚು ಜನರು ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಶಿವಮೊಗ್ಗ ಜಿಲ್ಲೆಯ ಏಳು ತಾಲೂಕಿನಿಂದ ದೊಡ್ಡ ಸಂಖ್ಯೆಯ ಜನರು ಭಾಗವಹಿಸಲಿದ್ದಾರೆ.ಹರತಾಳು ಹಾಲಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ

ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಎಚ್ಚರ ವಹಿಸಿʼ

FATAFAT-NEWS-9.ಶಿವಮೊಗ್ಗ: ರೋಗಬಾಧಿತ ಇಲಿ, ಹಂದಿ, ನಾಯಿ, ಕುದುರೆ, ಜಾನುವಾರುಗಳು ಮೂತ್ರದಲ್ಲಿನ ಬ್ಯಾಕ್ಟಿರಿಯವು ನೀರು, ಮಣ್ಣು, ಸಸ್ಯಗಳ ಮೂಲಕ ಮನುಷ್ಯರಿಗೆ ತಗುಲಿ ಮಾರಣಾಂತಿಕ ಲೆಪ್ರೋಸ್ಪೆರೋಸಿಸ್ ಸೋಂಕು ಹರಡಬಹುದು. ಹಾಗಾಗಿ ಸೋಂಕಿನ ನಿಯಂತ್ರಣಕ್ಕೆ ಎಲ್ಲ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

95 ಗ್ರಾಂ ಚಿನ್ನಾಭರಣ ಕದ್ದವರು ಅರೆಸ್ಟ್‌

FATAFAT-NEWS-10ಭದ್ರಾವತಿ: ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯ ಬೀರುವಿನಲ್ಲಿದ್ದ 95 ಗ್ರಾಂ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು 7.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ ನಿವಾಸಿ ಆರ್.ಮಂಜುಳಾ(21) ಮತ್ತು ಸುಜೈನ್ ಖಾನ್ (24 ) ಬಂಧಿತರು.

Shivamogga Speed News

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : August 31, 2025 at 9:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಆಗಷ್ಟ್ 31, 2025

Leave a Comment