ಶಿವಮೊಗ್ಗ: ನಗರದ (City) ಸಿಟಿ ಸೆಂಟರ್ ಪಕ್ಕದಲ್ಲಿರುವ ಅಂಡರ್ ಪಾಸ್ನಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು ವಾಹನ ಸವಾರರಿಗೆ ಸಮಸ್ಯೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಸಬಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ವಿಷಯ ತಿಳಿಸಿ ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮೋಟರ್ ಬಳಸಿ ನೀರು ಹೊರ ಹಾಕಿ ಎಂದು ಸೂಚಿಸಿದರು.
ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮ ರೂಪಿಸಬೇಕು.
– ಎಸ್.ಎನ್.ಚನ್ನಬಸಪ್ಪ, ಶಾಸಕ
ಇದನ್ನೂ ಓದಿ » ಐ ಫೋನ್ ಪ್ರಿಯರಿಗೆ ಗುಡ್ ನ್ಯೂಸ್, ಬೆಂಗಳೂರಿನಲ್ಲಿ ಆ್ಯಪಲ್ ಸ್ಟೋರ್ ಶುರು, ಹೇಗಿದೆ? ಏನೆಲ್ಲ ಸಿಗುತ್ತೆ?
MLA inspects underpass in shimoga City







