ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ದಫನ್ ಮಾಡಿರುವುದಾಗಿ ತಿಳಿಸಿದ್ದ ಮಾಸ್ಕ್ ಮ್ಯಾನ್ (Mask Man) ಚಿನ್ನಯ್ಯ ಅಲಿಯಾಸ್ ಭೀಮನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ತಡರಾತ್ರಿ ದಕ್ಷಿಣ ಕನ್ನಡದ ಪೊಲೀಸರು ಚಿನ್ನಯ್ಯನನ್ನ ಜೈಲಿಗೆ ಕರೆ ತಂದರು.
ನಡುರಾತ್ರಿ ಜೈಲಿಗೆ ಶಿಫ್ಟ್
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವ್ಯಾನ್ನಲ್ಲಿ ಚಿನ್ನಯ್ಯನನ್ನು ವಾಹನದಲ್ಲಿ ಕರೆತಂದರು. ರಾತ್ರಿ 1.30ರ ಹೊತ್ತಿಗೆ ಚಿನ್ನಯ್ಯನನ್ನು ಜೈಲಿನೊಳಗೆ ಕರೆದೊಯ್ಯಲಾಯಿತು. ಕೋರ್ಟ್ ಆದೇಶವನ್ನು ಪರಿಶೀಲಿಸಿದ ಜೈಲು ಅಧಿಕಾರಿಗಳು ಚಿನ್ನಯ್ಯನ ತಪಾಸಣೆ ಮಾಡಿ ಪ್ರತ್ಯೇಕ ಸೆಲ್ನಲ್ಲಿ ಇರಿಸಿದ್ದಾರೆ.
ಶಿವಮೊಗ್ಗ ಜೈಲಿಗೇಕೆ ಶಿಫ್ಟ್?
ಕಳೆದ 16 ದಿನದಿಂದ ಎಸ್ಐಟಿ ವಶದಲ್ಲಿದ್ದ ಚಿನ್ನಯ್ಯನಿಗೆ ಬೆಳ್ತಂಗಡಿ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭದ್ರತೆ ದೃಷ್ಟಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಿನ್ನೆ ಸಂಜೆ ದಕ್ಷಿಣ ಕನ್ನಡದಿಂದ ಚಿನ್ನಯ್ಯನನ್ನು ಕರೆದುಕೊಂಡು ಬಂದಿದ್ದ ದಕ್ಷಿಣ ಕನ್ನಡದ ಪೊಲೀಸರು ನಡುರಾತ್ರಿ ಜೈಲಿಗೆ ರವಾನಿಸಿದ್ದಾರೆ.

ಚಿನ್ನಯ್ಯನಿಗೆ ಜಾಮೀನು ನೀಡುವಂತೆ ಕಾನೂನು ಸೇವಾ ಪ್ರಾಧಿಕಾರದ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸೆ.9ರಂದು ವಿಚಾರಣೆ ಮುಂದೂಡಲಾಗಿದೆ.
ಇದನ್ನೂ ಓದಿ » ಕೋಟೆ ರಸ್ತೆಯಲ್ಲಿ ಹೇಗಿತ್ತು ಗಣಪತಿ ಮೆರವಣಿಗೆ? ಇಲ್ಲಿದೆ ಫೋಟೊ ಮಾಹಿತಿ
Dharmasthala mask man shifted to shimoga jail
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















