ಶಿವಮೊಗ್ಗ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ 2ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ (Training) ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಆಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನೆಲಮಹಡಿ ಕೊಠಡಿ ಸಂಖ್ಯೆ-1, ಕಾರವಾರ 581301 ಇಲ್ಲಿಗೆ ಅಕ್ಟೋಬರ್ 3 ರೊಳಗಾಗಿ ಸಲ್ಲಿಸಬೇಕು.
ಅಭ್ಯರ್ಥಿಗಳಿಗೆ ಕಾರವಾರದ ವೀರ ಬಹದ್ದೂರ್ ಹೆಂಜಾ ನಾಯ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226588ಗೆ ಸಂಪರ್ಕಿಸುವುದು.

ಇದನ್ನೂ ಓದಿ » ದೇವಸ್ಥಾನದಲ್ಲಿ ಕಳ್ಳತನವಾಗಿ ಎರಡೇ ಗಂಟೆಯಲ್ಲಿ ಆರೋಪಿ ಅರೆಸ್ಟ್, ಎಲ್ಲಿ?
Training for youths
