ಶಿವಮೊಗ್ಗ: ಇಂಟರ್ನ್ಯಾಷನಲ್ ಲಿಂಗಾಯತ ಯೂತ್ ಫೋರಮ್ ಶಿವಮೊಗ್ಗ ಚಾಪ್ಟರ್ನಿಂದ ಸೆ.20 ಮತ್ತು 21ರಂದು ಬೆಳಗ್ಗೆ 9.30ಕ್ಕೆ ನಗರದ ಸರ್ಜಿ ಕನ್ವೆಷನ್ ಹಾಲ್ನಲ್ಲಿ ಡಾಕ್ಟರ್ ಪ್ರಿನ್ಯುರ್ ಸಮ್ಮಿಟ್ (Doctors Summit) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ತಿಳಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಧನಂಜಯ ಸರ್ಜಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದರಾದ ಬಿ.ವೈ.ರಾಘವೇಂದ್ರ, ಡಾ. ಪ್ರಭಾ ಮಲ್ಲಿಕಾರ್ಜುನ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೆಂಗಳೂರು ರಾಮಯ್ಯ ಆಸ್ಪತ್ರೆ ಮುಖ್ಯ ಕಾರ್ಯನಿರ್ವಾಹಕ ಡಾ.ರಾಘವೇಂದ್ರ ಸ್ವಾಮಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಕೆ.ಎಸ್.ನವೀನ್, ಡಾ.ಧನಂಜಯ ಸರ್ಜಿ, ಐಲೈಫ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕೆಂಚಾಂಬ, ನಂಜಪ್ಪ ಆಸ್ಪತ್ರೆಯ ಡಾ.ಅವಿನಾಶ್ ಬೆನಕಪ್ಪ, ಐಕ್ಯಾಟ್ ಏರ್ ಅಂಬ್ಯುಲೆನ್ಸ್ನ ಡಾ.ಶಾಲಿನಿ ನಲ್ವಾಡ್, ಐಲೈಫ್ ಜಿಲ್ಲಾಧ್ಯಕ್ಷ ಕೆ.ಕಿರಣ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದರು.

350ಕ್ಕೂ ಹೆಚ್ಚು ವೈದ್ಯರು
ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳ 350 ಕ್ಕೂ ಹೆಚ್ಚು ವೈದ್ಯಕೀಯ, ದಂತ, ಆಯುರ್ವೇದಿಕ್ ವೈದ್ಯರು ಭಾಗವಹಿಸಲಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಎದುರಾಗುವ ಕಾನೂನು ಸಮಸ್ಯೆ, ಅವುಗಳ ಪರಿಹಾರ ಕ್ರಮ, ಡಿಜಿಟಲ್ ತಂತ್ರಜ್ಞಾನ ಬಳಕೆ ಸೇರಿದ ಹಲವು ವಿಷಯಗಳು ಕುರಿತು ಚರ್ಚಿಸಲಾಗುತ್ತದೆ ಎಂದು ಡಾ.ಧನಂಜಯ ಸರ್ಜಿ ತಿಳಿಸಿದರು.

ಸೆ.22ರಂದು ಸಮ್ಮೇಳನಕ್ಕೆ ಆಗಮಿಸಿರುವ ವೈದ್ಯರನ್ನು ಸಿಗಂದೂರಿಗೆ ನೆಟ್ವರ್ಕಿಂಗ್ ಟ್ರಿಪ್ ಕರೆದುಕೊಂಡು ಹೋಗಲಾಗುವುದು. ಇದರಲ್ಲಿ ವೈದ್ಯರು ವೈಯಕ್ತಿಕವಾಗಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು ಅನುಕೂವಾಗಲಿದೆ.
- ಕೆ.ಕಿರಣ್ ಕುಮಾರ್, ಐಲೈಫ್ ಜಿಲ್ಲಾಧ್ಯಕ್ಷ
![]()
ಸುದ್ದಿಗೋಷ್ಠಿಯಲ್ಲಿ ಡಾ.ಅವಿನಾಶ್ ಬೆನಕಪ್ಪ, ರವೀಂದ್ರ ಬೆಣ್ಣೆಹಳ್ಳಿ, ಹೆಚ್.ಸಿ.ಶಿವಕುಮಾರ್, ಡಾ.ಶಶಿಕಾಂತ್, ಡಾ.ಶಂಭುಲಿಂಗ ಬಂಕೊಳ್ಳಿ ಮತ್ತಿತರರಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ 5ನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ, ಮಹಾವೀರ ವೃತ್ತದಲ್ಲಿ ಮಾನವ ಸರಪಳಿ, ಪ್ರತಿಭಟನೆಗೆ ಕಾರಣವೇನು?

Doctors Summit in Sarji Convention hall
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





