ಶಿವಮೊಗ್ಗ ಜೈಲು ಸೇರಿದ ಮೂರೇ ದಿನಕ್ಕೆ ವಿಚಾರಣಾಧೀನ ಕೈದಿ ಸಾವು, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ವಿಚಾರಣಾಧೀನ ಕೈದಿಯಾಗಿ (Prisoner) ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಇಂದು ಬಳಗ್ಗೆ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್‌ (43) ಮೃತ ವಿಚಾರಣಾಧೀನ ಕೈದಿ. ಸೆ.15ರಂದು ಮನ್ಸೂರ್‌ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ ಸೆ.17ರ ಮಧ್ಯರಾತ್ರಿ ಈತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ತಂದೆ ಎದೆಗೆ ಕತ್ತರಿ ಚುಚ್ಚಿದ್ದ

ಸೆ.14ರಂದು ಮನ್ಸೂರ್‌ ತನ್ನ ತಂದೆಯ ಜೊತೆಗೆ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಗಲಾಟೆ ಮಾಡಿದ್ದ. ಕತ್ತರಿಯಿಂದ ತಂದೆಯ ಎದೆ, ಕುತ್ತಿಗೆ ಸೇರಿದಂತೆ ಹಲವೆಡೆ ಮಾರಣಾಂತಿಕವಾಗಿ ಚುಚ್ಚಿದ್ದ. ಈ ಹಿನ್ನೆಲೆ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತನನ್ನು ಬಂಧಿಸಿದ್ದ ಪೊಲೀಸರು ಶಿವಮೊಗ್ಗ ಜೈಲಿಗೆ ರವಾನಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೀಸಲಾತಿಯ ಶವಯಾತ್ರೆ, ಶಿವಮೂರ್ತಿ ಸರ್ಕಲ್‌ನಲ್ಲಿ ಟ್ರ್ಯಾಕ್ಟರ್‌ ಅಡ್ಡ ನಿಲ್ಲಿಸಿ ರಸ್ತೆ ತಡೆ

JNNCE-Admission-Advt-scaled

Shimoga jail Prisoner succumbed 

Leave a Comment