ಶಿವಮೊಗ್ಗ ಪಾಲಿಕೆಯಿಂದ ರಂಗೋಲಿ ಅಭಿಯಾನ, ಶಹಬ್ಬಾಸ್‌ ಅಂತಿದ್ದಾರೆ ಜನ, ಏನಿದು ಅಭಿಯಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ವಾಹನ ಬಂದರೂ ಕಸ ತಂದು ರಸ್ತೆ ಸುರಿಯುವವರಿಗೇನು ಕಡಿಮೆ ಇಲ್ಲ. ಇಂತಹವರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರು ರಂಗೋಲಿ (Rangoli) ಮೊರೆ ಹೋಗಿದ್ದಾರೆ.

ಶಿವಮೊಗ್ಗ ನಗರದ ವಿವಿಧೆಡೆ ಖಾಲಿ ನಿವೇಶನಗಳು, ರಸ್ತೆ ಬದಿ, ಕನ್ಸರ್‌ವೆನ್ಸಿಗಳಲ್ಲಿ ಜನ ಕಸ ತಂದು ಸುರಿಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರು ರಂಗೋಲಿ ಅಭಿಯಾನ ಆರಂಭಿಸಿದ್ದಾರೆ. ಕಸ ಸುರಿಯುವ ಜಾಗದಲ್ಲಿ ಚಂದದ ರಂಗೋಲಿ ಬಿಡಿಸಿ ತಿಳಿವಳಿಕೆ ಮೂಡಿಸುತ್ತಿದ್ದಾರೆ.

ಏನಿದು ರಂಗೋಲಿ ಅಭಿಯಾನ?

ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವ ಜಾಗಗಳನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಗುರುತಿಸಿದ್ದಾರೆ. ಈ ಜಾಗದಲ್ಲಿ ಪೌರ ಕಾರ್ಮಿಕರು ಸ್ವಚ್ಛಗೊಳಿಸಿ, ಅಲ್ಲಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿದ್ದಾರೆ. ಕೆಲವೆಡೆ ಸಗಣಿ ಸಾರಿಸಿ ರಂಗೋಲಿ ಬಿಡಿಸಲಾಗಿದೆ. ರಂಗೋಲಿಯ ಮೂಲಕವೇ ಕಸ ಹಾಕಬೇಡಿ ಎಂದು ಬರೆದಿದ್ದಾರೆ.

Rangoli on Shimoga Streets

ಶಿವಮೊಗ್ಗದ ದುರ್ಗಿಗುಡಿ, ಎಎನ್‌ಕೆ ರಸ್ತೆ, ಹೊಸಮನೆ ಸೇರಿದಂತೆ ಹಲವು ಕಡೆಗಳಲ್ಲಿ ಪಾಲಿಕೆ ಸಿಬ್ಬಂದಿ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಿದ್ದಾರೆ.

[su_note note_color=”#f1f1f1″ text_color=”#000000″ radius=”0″]

ಕಸ ಹಾಕಿದರೆ ದಂಡ ಫಿಕ್ಸ್‌

[su_divider top=”no” style=”dotted” divider_color=”#f1f1f1″ link_color=”#000000″ margin=”10″]

ಇನ್ನು, ರಂಗೋಲಿ ಅಭಿಯಾನ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಮಹಾನಗರ ಪಾಲಿಕೆ quote.webpಆಯುಕ್ತ ಮಾಯಣ್ಣ ಗೌಡ, ನಿರಂತರವಾಗಿ ಕಸ ಹಾಕುವ ಜಾಗಗಳನ್ನು ಬ್ಲಾಕ್‌ ಸ್ಪಾಟ್‌ ಎಂದು ಗುರುತಿಸಿದ್ದೇವೆ. ಇವುಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಬೇಕಿದೆ. ಮೊದಲಿಗೆ ರಂಗೋಲಿ ಹಾಕುತ್ತಿದ್ದೇವೆ. ಆದರೂ ಬದಲಾವಣೆ ಆಗದೆ ಇದ್ದರೆ ಅಂತಹ ಜಾಗಗಳಲ್ಲಿ ಸಿಸಿಟಿವಿ ಅಳವಡಿಸಿ ಕಸ ಹಾಕುವವರ ವಿರುದ್ಧ ದಂಡ ವಿಧಿಸುತ್ತೇವೆ ಎಂದು ಎಚ್ಚರಿಸಿದರು.[/su_note]

Rangoli on Shimoga Streets

ಅಭಿಯಾನದಿಂದ ಜಾಗೃತರಾಗಿದ್ದಾರೆ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವುದನ್ನು ತಪ್ಪಿಸಲು ಮಹಾನಗರ ಪಾಲಿಕೆ ಹಿಂದೆಯು ಅಭಿಯಾನಗಳನ್ನು ನಡೆಸಿತ್ತು. ಕಸ ಸುರಿಯುವ ಜಾಗಗಳನ್ನು ಸ್ವಚ್ಛಗೊಳಿಸಿ ಅಲ್ಲಿ ಸೂಚನಾ ಫಲಕಗಳನ್ನು ನೆಡಲಾಗಿತ್ತು. ಇದರಿಂದ ಆ ಜಾಗಗಳಲ್ಲಿ ಕಸ ಬೀಳುವುದು ತಪ್ಪಿತ್ತು. ಆದರೆ ಇನ್ನೂ ಕೆಲವು ಕಡೆ ಜನ ಕಸ ಸುರಿಯುವುದು ಮುಂದುವರೆದಿತ್ತು.

Rangoli on Shimoga Streets

ರಾತ್ರಿ ಬಂದು ಕಸ ಹಾಕ್ತಾರೆ

ಶಿವಮೊಗ್ಗ ನಗರದಲ್ಲಿ ಬೆಳಗಿನ ಜಾವದಿಂದ ಮಧ್ಯಾಹ್ನ 2 ಗಂಟೆವರೆಗೆ ಮನೆ ಮನೆಯಿಂದ ಕಸ ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ 99 ವಾಹನಗಳನ್ನೂ ನಿಯೋಜಿಸಲಾಗಿದೆ. ಆದರೂ ಕೆಲವರು ಈ ವಾಹನಗಳಿಗೆ ಕಸ ಹಾಕದೆ ರಾತ್ರೋರಾತ್ರಿ ಸಾರ್ವಜನಿಕ ಸ್ಥಳದಲ್ಲಿ ತಂದು ಸುರಿಯುತ್ತಿದ್ದಾರೆ. ಪೌರ ಕಾರ್ಮಿಕರು ಆಗಾಗ ಇಂತಹ ಜಾಗಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಾರೆ. ಅದರೆ ಇದಕ್ಕೆ ಶಾಶ್ವತ ಪರಿಹಾರ ನೀಡಲು ರಂಗೋಲಿ ಅಭಿಯಾನ ಆರಂಭಿಸಿದ್ದಾರೆ. ಸಾರ್ವಜನಿಕರು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Rangoli on Shimoga Streets

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಕ್ಕಳ ದಸರಾ, ಯಾವ್ಯಾವ ದಿನ ಏನೆಲ್ಲ ಸ್ಪರ್ಧೆ, ಕಾರ್ಯಕ್ರಮಗಳು ಇರಲಿವೆ? ಇಲ್ಲಿದೆ ಲಿಸ್ಟ್

#news, #Karnataka, #Shivamogga, #waste management, #civic awareness, #garbage, #littering, #rangoli, #art campaign, #local news, #sanitation.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment