ಸಾಗರದಲ್ಲಿ ಅಖಾಡ ರೆಡಿ, ಇಂದಿನಿಂದ ಪಟ್ಟು ಹಾಕಲಿದ್ದಾರೆ ರಾಷ್ಟ್ರಮಟ್ಟದ ಪೈಲ್ವಾನರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಸಾಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಅ.1 ಮತ್ತು 2ರಂದು ರಾಷ್ಟ್ರ ಮಟ್ಟದ ದಸರಾ ಕುಸ್ತಿ (Kushti) ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಹೇಳಿದರು.

ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದೆ ಎಂದರು.

ಬೆಳ್ಳಿ ಗದೆ, ಬಂಗಾರದ ಬಳೆ, ಅಖಾಡ ಬಳೆ, ಪರ್ಸಿ ಬಳೆ ಸೇರಿ ಆಕರ್ಷಕ ನಗದು ಬಹುಮಾನ ಇಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹರ್ಯಾಣ, ಪಂಜಾಬ್, ದೆಹಲಿ, ಬೆಳಗಾವಿ ಸೇರಿ ದೇಶದ ಬೇರೆಬೇರೆ ಭಾಗಗಳಿಂದ ಪೈಲ್ವಾನರು ಪಂದ್ಯಾವಳಿಗೆ ಆಗಮಿಸುತ್ತಿದಾರೆ. ಸುಮಾರು 120 ಜೋಡಿ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದೆ. ಜತೆಗೆ ಮಹಿಳಾ ಕುಸ್ತಿ ಪಂದ್ಯಾವಳಿ ನಡೆಸಲಾಗುತ್ತಿದೆ ಎಂದರು.

national level kusti in Sagara
ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹಬ್ಬದ ಖರೀದಿ ಅಬ್ಬರ, ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಜನಸಾಗರ

ಧರ್ಮರಾಜ್, ಡಾ. ಶ್ರೀಪಾದ ಹೆಗಡೆ, ಕೆ.ಜಿ.ಸಂತೋಷ್, ವೆಂಕಟೇಶ್, ಗಣೇಶ್, ಶ್ರೀನಿಧಿ, ಕೃಷ್ಣಾನಂದ್‌, ರಾಘವೇಂದ್ರ ಇತರರಿದ್ದರು.

National level Kushti

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment