ಸೊರಬ: ಚಂದ್ರಗುತ್ತಿಯ (Chandragutti) ಶ್ರೀ ರೇಣುಕಾಂಬ ದೇವಸ್ಥಾನಲ್ಲಿ ಆಯುಧ ಪೂಜೆಯಂದು ಚಂಡಿಕಾ ಹೋಮ ನಡೆಸಲಾಯಿತು. ಪ್ರಧಾನ ಅರ್ಚಕ ಅರವಿಂದ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು.
ಸಾವಿರ ಸಾವಿರ ಭಕ್ತರು
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಶಿವಮೊಗ್ಗ, ಸೇರಿ ವಿವಿಧೆಡೆಯ ಭಕ್ತರು ಹೋಮ, ಪೂಜೆಯಲ್ಲಿ ಭಾಗವಹಿಸಿದ್ದರು. ಮಳೆ ನಡವೆಯು ಸಾವಿರಾರು ಭಕ್ತರು ರೇಣುಕಾದೇವಿಯ ದರ್ಶನ ಪಡೆದರು. ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.
ಪರಿವಾರ ದೇವರುಗಳಿಗೆ ಪೂಜೆ
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಈ ಸಂದರ್ಭ ಉಪಸ್ಥಿತರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್, ಪ್ರೀಮಿಯರ್ ಶೋಗಳು ಹೌಸ್ಫುಲ್, ಏನಂದ್ರು ಜನ?

ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ಚಂದ್ರಗುತ್ತಿಯಲ್ಲಿ ಸ್ವಲ್ಪ ಸಮಯ ಸಂಚಾರ ದಟ್ಟಣೆ ಉಂಟಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
Chandragutti
