ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿ ಗೂಡ್ಸ್ ವಾಹನ (Goods Vehicle) ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ವಿನೋಬನಗರ ನಿವಾಸಿ ರಂಗನಾಥ್ (40) ಮೃತರು.
ಕಳೆದ ರಾತ್ರಿ ಗೂಡ್ಸ್ ವಾಹನವು ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತಿತ್ತು. ತ್ಯಾವರೆಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ನಾಲ್ವರ ಪೈಕಿ ರಂಗನಾಥ್ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಚಂದ್ರಗುತ್ತಿಯಲ್ಲಿ ಚಂಡಿಕಾ ಹೋಮ, ಸಾವಿರ ಸಾವಿರ ಭಕ್ತರಿಂದ ದೇವಿ ದರ್ಶನ

Goods Vehicle

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
