ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಮುಂಭಾಗ ಬೇಕರಿಯಲ್ಲಿ (Bakery) ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ.
ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಬೇಕರಿಯಲ್ಲಿ ರಾತ್ರಿ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಯವರು, ಸ್ಥಳೀಯರು ಎಚ್ಚರವಾಗಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಬೇಕರಿ ಒಳಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ಇದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕರೆಂಟ್ ಕಂಬಗಳ ತೆರವಿಗೆ ಒತ್ತಾಯ, ಡಿಸಿ ಕಚೇರಿ ಮುಂಭಾಗ ಹೋರಾಟ
Bakery







