ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಡಾ. ಅಂಬೇಡ್ಕರ್ ಭವನಕ್ಕೆ ಜಾಗ ಮಂಜೂರು ಮಾಡಿಕೊಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗಾಜನೂರು ಗ್ರಾಮದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ (Padayathre) ನಡೆಸಲಾಯಿತು.
ಗಾಜನೂರು ಗ್ರಾಮ ಪಂಚಾಯಿತಿಯ ಎ.ಕೆ, ಎ.ಡಿ ಕಾಲೋನಿ ಪಕ್ಕದಲ್ಲಿರುವ ಹಳೆಯ ದೊಡ್ಡಿ ಖಾಲಿ ಜಾಗವನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಜೂರು ಮಾಡಿಕೊಡುವಂತೆ ಆಗ್ರಹಿಸಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಗಾಜನೂರು ಗ್ರಾಮ ಪಂಚಾಯಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಹಾಗೂ ಆದಿ ದ್ರಾವಿಡ ಜನಾಂಗದ ಸುಮಾರು 150ಕ್ಕೂ ಹೆಚ್ಚು ಕುಟುಂಬಗಳ ವಾಸವಾಗಿವೆ. ಪ್ರತಿ ಮನೆಯಲ್ಲಿ ಎರಡು ಮೂರು ಕುಟುಂಬಗಳು ವಾಸವಾಗಿವೆ. ಈ ಜನಾಂಗದವರಿಗೆ ಶುಭ ಕಾರ್ಯಗಳನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಭಾಂಗಣವಿಲ್ಲ. ಆದ್ದರಿಂದ ಡಾ. ಅಂಬೇಡ್ಕರ್ ಭವನಕ್ಕೆ ಜಾಗ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ ಪ್ರಮುಖರಾದ ಹಾಲೇಶಪ್ಪ, ಶಿವಾಜಿ, ಮೂರ್ತಿ, ನಾಗರಾಜ್, ಪ್ರಭು, ರಾಜ್ಕುಮಾರ್, ಆನಂದ್, ಶೇಷಪ್ಪ, ಪರಮೇಶ್ವರ ಸೂಗೂರು, ರಂಗಪ್ಪ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಮಹಿಳೆ ಅಸ್ವಸ್ಥ, ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು
Padayathre
LATEST NEWS
- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





