ಭದ್ರಾವತಿ: ಚಾಕು, ಲಾಂಗ್, ವಿಕೆಟ್ ಹಿಡಿದು ನಡುರಾತ್ರಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಶಿವರಾಮ ನಗರ ಮತ್ತು ಮಾಚೇನಹಳ್ಳಿ ನಡುವೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಅರೆಸ್ಟ್ (Arrest) ಮಾಡಿದ್ದಾರೆ.
ಲೋಕೇಶ್, ಅಕಾಶ್, ಸುಂದರ್, ಸುಜಿತ್, ದಿಲೀಪ್ ಬಂಧಿತರು. ರಸ್ತೆಯಲ್ಲಿ ಓಮ್ನಿ ಕಾರು ನಿಲ್ಲಿಸಿಕೊಂಡು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದರು. ಪೊಲೀಸರು ದಾಳಿ ನಡೆಸಿದಾಗ ಐವರು ಪರಾರಿಯಾಗಲು ಯತ್ನಿಸಿದ್ದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಮಜಾ ಮಾಡೋಕೆ ದರೋಡೆ ಪ್ಲಾನ್
ಆರೋಪಿಗಳು ಭದ್ರಾವತಿಯ ವಿವಿಧೆಡೆ ದನಗಳ್ಳತನ ಮಾಡಿದ್ದರು. ಅವುಗಳ ಮಾರಾಟದಿಂದ ಬಂದ ಹಣದಲ್ಲಿ ಮಜಾ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರಿಗೆ ಅನುಮಾನ ಬಂದ ಹಿನ್ನೆಲೆ ದನಗಳ್ಳತನ ಬಿಟ್ಟು ದರೋಡೆಗೆ ಹೊಂಚು ಹಾಕಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಆನಂದಪುರದಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ, ಧಗಧಗ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು