ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ನಿಟ್ಟೂರು ಸಮೀಪದ ಗುರಟೆ ಗ್ರಾಮದ ಬಳಿ ಖಾಸಗಿ ಬಸ್ (Private Bus) ಮತ್ತು ಲಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಹೊಸನಗರ ಕಡೆಯಿಂದ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ ಲಾರಿ ಮಧ್ಯೆ ಡಿಕ್ಕಿಯಾಗಿವೆ. ಘಟನೆಯಲ್ಲಿ ಚಾಲಕ ರಮೇಶ್ ಹಳೂರಿ ಮತ್ತು ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ದಂಪತಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಇದನ್ನೂ ಓದಿ » ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗಿನ ಜಾವ ಮನೆಗೆ ನಡೆದು ಹೋಗುವಾಗ ಅಡ್ಡಗಟ್ಟಿದ ಬೈಕ್ ಸವಾರ
Private Bus
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





