ಸಾಗರ ತಾಲೂಕಿಗೆ ಮತ್ತೆರಡು ಪೊಲೀಸ್‌ ಠಾಣೆ ಬೇಕು, ಗೃಹ ಸಚಿವರಿಗೆ ಎಂಎಲ್‌ಎ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ: ಪಟ್ಟಣಕ್ಕೆ ನೂತನ ಟ್ರಾಫಿಕ್‌ ಪೊಲೀಸ್‌ ಠಾಣೆ (Police Station) ಮತ್ತು ತುಮರಿ – ಬ್ಯಾಕೋಡು ಭಾಗಕ್ಕೆ ನೂತನ ಪೊಲೀಸ್‌ ಠಾಣೆ ಮಂಜೂರು ಮಾಡುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರ ಪಟ್ಟಣ ಬೆಳೆಯುತ್ತಿದ್ದು ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇನ್ನು, ಅನೇಕ ಪ್ರವಾಸಿ ತಾಣಗಳಿದ್ದು ಪ್ರವಾಸಿ ವಾಹನಗಳ ದಟ್ಟಣೆಯು ಹೆಚ್ಚಿರುತ್ತದೆ. ಸಿಗಂದೂರಿಗೆ ನಿತ್ಯ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಣ ಮತ್ತು ಸುಗಮ ಸಂಚಾರಕ್ಕೆ ಪ್ರತ್ಯೇಕ ಸಂಚಾರ ಠಾಣೆ ಅವಶ್ಯವಿದೆ ಎಂದು ಬೇಳೂರು ಗೋಪಾಲಕೃಷ್ಣ ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನು, ಸಿಗಂದೂರು ಭಾಗಕ್ಕೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಕ್ಷೇತ್ರದ ಸಮೀಪವಿರುವ ಬ್ಯಾಕೋಡು – ತುಮರಿ ಪ್ರದೇಶಕ್ಕೆ ನೂತನ ಪೊಲೀಸ್‌ ಠಾಣೆ ಮಂಜೂರು ಮಾಡುವಂತೆಯು ಮನವಿಯಲ್ಲಿ ತಿಳಿಸಲಾಗಿದೆ.

MLA-Beluru-Gopalakrishna-Meets-Home-Minister-G-Parameshwara - Requests for police station

ಇದನ್ನೂ ಓದಿ » ಶಿವಮೊಗ್ಗ ಲೈವ್.ಕಾಂ ವರದಿ ಪರಿಣಾಮ, ಕೋಟಿ ವೆಚ್ಚದಲ್ಲಿ ರಿಪೇರಿಯಾಗ್ತಿದೆ ರೋಡ್‌, ಸ್ಥಳಕ್ಕೆ ಎಂಎಲ್‌ಎ ಭೇಟಿ

Police Station

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment