ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 10 ಸೆಪ್ಟೆಂಬರ್ 2019
ಗಣಪತಿ ಮೆರವಣಿಗೆಯಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆಯಾಗಿ, ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೂರ್ಯ ಮತ್ತು ಕುಮಾರ್ ಎಂಬುವವರಿಗೆ ಚಾಕು ಇರಿತಕ್ಕೆ ಒಳಗಾದವರು. ರಿಪ್ಪನ್’ಪೇಟೆಯಲ್ಲಿ ಇಂದು ಸಂಜೆ ಗಣಪತಿ ವಿಸರ್ಜನೆ ವೇಳೆ ಹೆಣ್ಣು ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಕೆಲವು ಯುವಕರು ಅವರ ನಡುವೆ ಡಾನ್ಸ್ ಮಾಡಲು ಮುಂದಾಗಿದ್ದಾರೆ. ಸೂರ್ಯ ಮತ್ತು ಕುಮಾರ್ ಅವರು ಇದನ್ನು ವಿರೋಧಿಸಿದ್ದಾರೆ.
ಇದರಿಂದ ಕುಪಿತಗೊಂಡ ಯುವಕರು ಸೂರ್ಯ ಮತ್ತು ಕುಮಾರ್’ಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆ ಸಂಬಂಧ ಧನುಷ್ ಮತ್ತು ಸುಚಿತ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದ್ದಿದ್ದಾರೆ ಎಂದು ತಿಳಿದು ಬಂದಿದೆ. ಜೋಸೆಫ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಳೆ ವೈಷಮ್ಯವು ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





