ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ರಾಷ್ಟ್ರೀಯ ಹೆದ್ದಾರಿಯ ಬೃಹತ್ ಗುಂಡಿಗಳನ್ನು (Pot Holes) ಮುಚ್ಚದ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಮತ್ತಿಮನೆ ಶ್ರೀಕಾಂತ್ ಎಂಬುವವರು ವಿಭಿನ್ನ ಪ್ರತಿಭಟಿನೆ ಆರಂಭಿಸಿದ್ದಾರೆ. ಪ್ರತಿ ಗುಂಡಿಯಲ್ಲಿ ಅಡಿಕೆ ಸಸಿಗಳನ್ನು ನೆಟ್ಟು ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಹೊಸನಗರ – ನಗರ ಮಾರ್ಗದಲ್ಲಿ ಭಾರಿ ಗಾತ್ರದ ಗುಂಡಿಗಳಾಗಿವೆ. ಇವುಗಳಿಂದ ನಿತ್ಯ ಒಂದಿಲ್ಲೊಂದು ಅಪಘಾತವಾಗುತ್ತಿವೆ. ಹಲವರು ಬಿದ್ದು ಗಾಯಗೊಂಡಿದ್ದಾರೆ. ಹಾಗಾಗಿ ಸರ್ಕಾರದ ಗಮನ ಸೆಳೆಯಲು ಮತ್ತಿಮನೆ ಶ್ರೀಕಾಂತ್ ಗುಂಡಿ ಮುಚ್ಚಿ, ಅಡಿಕೆ ಸಸಿ ನೆಡುವ ಪ್ರತಿಭಟನೆ ಮಾಡುತ್ತಿದ್ದಾರೆ.
ವಾರದ ಹಿಂದೆ ಬಿದ್ದು ಗಾಯಗೊಂಡಿದ್ದರು
ಈ ಕುರಿತು ಮಾತನಾಡಿದ ಮತ್ತಿಮನೆ ಶ್ರೀಕಾಂತ್, ‘ಸರ್ಕಾರದ ಗಮನ ಸೆಳೆಯಲು ಪ್ರತಿ ಗುಂಡಿಯನ್ನು ಮುಚ್ಚಿ ಅದರಲ್ಲಿ ಅಡಿಕೆ ಸಸಿ ನೆಡುತ್ತಿದ್ದೇನೆ. ಹೊಸನಗರ – ನಗರ ಮಧ್ಯೆ 16 ಕಿ.ಮೀ ರಸ್ತೆಯಲ್ಲಿ ಆಳ, ಅಗಲವಾದ ಗುಂಡಿಗಳಿವೆ. ವಾಹನ ಸಂಚಾರಕ್ಕೆ ಬಹಳ ತೊಂದರೆ ಆಗುತ್ತಿದೆ. ವಾರದ ಹಿಂದೆ ಬೈಕಿನಲ್ಲಿ ತೆರಳುವಾಗ ಹೊಂಡ ಗುಂಡಿಯ ಕಾರಣಕ್ಕೆ ಬಿದ್ದಿದ್ದೆ. ಅದೃಷ್ಟವಶಾತ್ ಪಾರಾದೆ. ನನ್ನಂತೆ ಮತ್ಯಾರಿಗು ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂತ ಈ ರೀತಿಯ ಪ್ರತಿಭಟೆನೆ ನಡೆಸುತ್ತಿದ್ದೇನೆʼ ಎಂದು ತಿಳಿಸಿದರು.
ಮತ್ತಿಮನೆ ಶ್ರೀಕಾಂತ್ ಪ್ರತಿಭಟನೆಗೆ ಜನರು ಉತ್ತಮ ಪ್ರತಿಕ್ರಿಯೆ ಲಭಿಸಿದೆ. ನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಸರ್ಕಾರ ಗುಂಡಿಗಳನ್ನು ಮುಚ್ಚಿದರೆ ಈ ಭಾಗದ ಜನರು, ವಾಹನ ಸವಾರರು ನಿಶ್ಚಿಂತೆಯಿಂದ ಓಡಾಡಬಹುದಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಹಾಪ್ಕಾಮ್ಸ್ಗೆ 15 ನಿರ್ದೇಶಕರು ಅವಿರೋಧ ಆಯ್ಕೆ, ವಿಜಯ್ಕುಮಾರ್ ಹ್ಯಾಟ್ರಿಕ್ ಸಾಧನೆ
Pot Holes
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















