ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಇವತ್ತು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಕ್ಕೆ ಯಾವುದೆ ಅಲರ್ಟ್ ಇಲ್ಲ. ಶಿವಮೊಗ್ಗ ಜಿಲ್ಲೆಯು ಈ ವ್ಯಾಪ್ತಿಗೆ ಒಳಪಡಲಿದೆ. (Weather)
ಶಿವಮೊಗ್ಗ ಜಿಲ್ಲೆಯಲ್ಲಿಯು ಮಳೆ ತಗ್ಗಿದೆ. ಮತ್ತೆ ಬಿಸಿಲಿನ ಅಬ್ಬರ ಹೆಚ್ಚಳ ಆಗುವ ಸಾಧ್ಯತೆ ಇದೆ. ಕಳೆದ ಎರಡು ದಿನಕ್ಕೆ ಹೋಲಿಕೆ ಮಾಡಿದರೆ ವಿವಿಧೆಡೆ ತಾಪಮಾನ ಎರಡು ಡಿಗ್ರಿವರೆಗೆ ಹೆಚ್ಚಳವಾಗಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಕೆಲ ಸಮಯ ಸಾಧಾರಣ ಮಳೆಯಾಗುವ ಅಂದಾಜಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ನೀರಿನ ತೊಟ್ಟಿಯಲ್ಲಿ ಕಾಡು ಕೋಣದ ಮೃತದೇಹ ಪತ್ತೆ