ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ ಅ. 31ರಿಂದ ನವೆಂಬರ್ 26ರವರೆಗೆ ಬಿಜೆಪಿಯಿಂದ ಏಕತಾಯಾತ್ರೆ (Ekata Yathre) ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್, ಏಕತಾಯಾತ್ರೆ ನಿಮಿತ್ತ ಬಿಜೆಪಿ ಜಿಲ್ಲಾ ಘಟಕದಿಂದ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ತ್ರಿವರ್ಣಧ್ವಜ ಹಿಡಿದು ಪ್ರತಿ ದಿನ 8 ರಿಂದ 10 ಕಿ.ಮೀ ನಡೆಯಲಿದ್ದಾರೆ. ಗಿಡ ನೆಟ್ಟು ಗೋಪೂಜೆ ಮಾಡಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದರು.
ಏಕತಾಯಾತ್ರೆಯ ಸಮಾರೋಪದಲ್ಲಿ ಸರ್ದಾರ್ ಪಟೇಲ್ ಅವರ ಬಗ್ಗೆ ಪ್ರಬಂಧ, ಭಾಷಣ ಸ್ಪರ್ಧೆ ಹಾಗೂ ಏಕತಾ ಪ್ರತಿಮೆಯ ಬಗ್ಗೆ ರೀಲ್ಸ್ ಮಾಡುವ ಸ್ಪರ್ಧೆ ಇರುತ್ತದೆ. ನಶೆಮುಕ್ತ ಭಾರತದ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಸ್ವದೇಶಿ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಪ್ರಮುಖರಾದ ಮಾಲತೇಶ್, ಪದ್ಮಿನಿರಾವ್, ಹರಿಕೃಷ್ಣ, ಕುಪೇಂದ್ರ, ದರ್ಶನ್, ಸಂತೋಷ್, ಸತೀಶ್ ರಾಮಿನಕೊಪ್ಪ, ಸಂತೋಷ್, ಅಣ್ಣಪ್ಪ, ಚಂದ್ರಶೇಖರ್ ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರಣಜಿ ಕ್ರಿಕೆಟ್, ಮೊದಲ ದಿನದ ಆಟ ಮುಕ್ತಾಯ, ಕರ್ನಾಟಕದ ಸ್ಕೋರ್ ಎಷ್ಟು? ಇಲ್ಲಿದೆ ಡಿಟೇಲ್ಸ್
Ekata Yathre
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





