‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್‌ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?

Published On: 27 October 2025 | Monday

ಸಾಗರ: ನಾನು ಸಚಿವ (Minister) ಸ್ಥಾನದ ಪ್ರಬಲ ಆಕಾಂಕ್ಷಿ. ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು ಪಕ್ಷದ ಮೇಲೆ ಒತ್ತಡ ಹೇರಬೇಕು ಎಂದು ನಾನು ಒತ್ತಾಯಿಸುವುದಿಲ್ಲ. ಒತ್ತಡ ತರುವುದು ಬಿಡುವುದು ಅವರಿಗೆ ಬಿಟ್ಟಿದ್ದು. ಒಟ್ಟಾರೆ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಅಭಿವೃದ್ದಿ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು.

Beluru-Gopalakrishna-Speaks-to-media-in-sagara

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಸೋಮಶೇಖರ ಲ್ಯಾವಿಗೆರೆ, ರವಿಕುಮಾರ್, ಗಿರೀಶ್ ಕೋವಿ, ಮಹಾಬಲ ಕೌತಿ, ವಿಲ್ಸನ್, ರವೀಂದ್ರ ಸಾಗರ್, ಅನ್ವರ್ ಭಾಷಾ, ಕಲ್ಲಪ್ಪ ಮೆಣಸಿನಾಳ್, ಲಿಂಗರಾಜ್ ಆರೋಡಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » KGFಗೆ ತೆರಳಲು ಶಿವಮೊಗ್ಗದಲ್ಲಿ ಬೆಂಗಳೂರು ಬಸ್‌ ಹತ್ತಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : October 27, 2025 at 12:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಅಕ್ಟೋಬರ್ 27, 2025

Leave a Comment