ತೀರ್ಥಹಳ್ಳಿ ತಾಲೂಕು ಪಂಚಾಯಿತಿ ಕಟ್ಟಡಕ್ಕೆ ಬರಲು ಜನರಿಗೆ ಭಯ, ಅಧಿಕಾರಿಗಳಿಗೆ ಢವಢವ, ಕಾರಣವೇನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 17 ಸೆಪ್ಟೆಂಬರ್ 2019

ತೀರ್ಥಹಳ್ಳಿ ತಾಲೂಕು ಕಚೇರಿಗೆ ಭೇಟಿ ನೀಡಲು ಅಧಿಕಾರಿಗಳು ಭಯ ಪಡ್ತಿದ್ದಾರೆ. ಜನರು ಹೆದರುತ್ತಿದ್ದಾರೆ. ಜನ ಪ್ರತಿನಿಧಿಗಳಿಗು ಢವಢವ ಶುರುವಾಗಿದೆ. ಇದಕ್ಕೆ ಕಾರಣ, ತಾಲೂಕು ಪಂಚಾಯಿತಿ ಕಟ್ಟಡದ ದುಸ್ಥಿತಿ.

ತಾಲೂಕು ಪಂಚಾಯಿತಿ ಕಟ್ಟಡದ ಒಂದು ಭಾಗ ಕುಸಿಯುವ ಭೀತಿ ಎದುರಾಗಿದೆ. ಅಡಕೆ ಮರಗಳ ತುಂಡುಗಳನ್ನು ಆಸರೆಗೆ ಇರಿಸಲಾಗಿದೆ. ಇದೆ ಕಾರಣಕ್ಕೆ ಜನರು, ಅಧಿಕಾರಿಗಳು, ಜನಪ್ರತಿನಿಧಿಗಳು ಇಲ್ಲಿ ಓಡಾಡಲು ಹೆದರುತ್ತಿದ್ದಾರೆ. ಈ ಕಟ್ಟಡದ ಕಾರಿಡಾರ್ ಮೂಲಕವೆ ತಾಲೂಕು ಪಂಚಾಯಿತಿ ಸಭಾಂಗಣಕ್ಕೆ ತೆರಳಬೇಕಿದೆ.

ಕೂಡಲೆ ಇದನ್ನು ದುರಸ್ಥಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಅಪಾಯ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment