ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೈಕ್ನಲ್ಲಿ ಬಂದ ಇಬ್ಬರು ಯುವಕರು ವಿಳಾಸ ಕೇಳುವ ನೆಪದಲ್ಲಿ ರತ್ನಮ್ಮ ಎಂಬವವರ ಕೊರಳಲ್ಲಿದ್ದ 70 ಗ್ರಾಂ ತೂಕದ ಬಂಗಾರದ ಸರ (Gold Chain) ಕಸಿದು ಪರಾರಿಯಾಗಿದ್ದಾರೆ. ವಿನೋಬನಗರದ ಲಕ್ಷ್ಮೀಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.
ರತ್ನಮ್ಮ ಅವರು ದೇವಸ್ಥಾನದಿಂದ ಹಿಂತಿರುಗಿ ಮನೆಯ ಕಾಂಪೌಂಡ್ ಒಳಗೆ ಬಂದು ಗೇಟ್ ಹಾಕುತ್ತಿದ್ದಾಗ ಯುವಕನೊಬ್ಬ ವಿಳಾಸ ಕೇಳುವವನಂತೆ ಬಂದಿದ್ದ. ಶಿವಣ್ಣನ ಮನೆ ಎಲ್ಲಿ ಎಂದು ವಿಚಾರಿಸಿದ್ದ. ತಕ್ಷಣ ರತ್ನಮ್ಮ ಅವರ ಕೊರಳಿಗೆ ಕೈ ಹಾಕಿ ₹2.20 ಲಕ್ಷ ಮೌಲ್ಯದ 70 ಗ್ರಾಂ ತೂಕದ ಚಿನ್ನದ ಸರ ಕಸಿದುಕೊಂಡು ಓಡಿದ್ದಾನೆ. ಬೈಕಿನಲ್ಲಿ ಬಂದಿದ್ದ ಮತ್ತೊಬ್ಬ ಯುವಕನೊಂದಿಗೆ ಪರಾರಿಯಾದ ಎಂದು ಆರೋಪಿಸಲಾಗಿದೆ.
ಚಿನ್ನದ ಸರ ಕಸಿದುಕೊಂಡವನು ಅಂದಾಜು 30 ವರ್ಷದವನಿರಬೇಕು ಎಂದು ಆರೋಪಿಸಿ ದೂರು ನೀಡಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





