ಶಿವಮೊಗ್ಗದಲ್ಲಿ ಅಣ್ಣಾಮಲೈಗು ತಟ್ಟಿತು ವಿಮಾನ ಕ್ಯಾನ್ಸಲ್‌ ಬಿಸಿ, ತರಾತರಿಯಲ್ಲಿ ಮರಳಿದ ಮಾಜಿ ಐಪಿಎಸ್‌ ಅಧಿಕಾರಿ

ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರಿಗೆ ವಿಮಾನ ಕ್ಯಾನ್ಸಲ್‌ (Cancel) ಬಿಸಿ ತಟ್ಟಿದೆ. ಹಾಗಾಗಿ ತರಾತುರಿಯಲ್ಲಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಮರಳಿದರು.

ಶಿವಮೊಗ್ಗದ ಒಡ್ಡಿನಕೊಪ್ಪ ಸಮೀಪದ ಮಲ್ಲೇಶ್‌ ಕನ್ವೆನ್ಷನ್‌ ಹಾಲ್‌ನಲ್ಲಿ ನಡೆಯುತ್ತಿದ್ದ ಪರಿಚಿತರೊಬ್ಬರ ಮದುವೆ ಸಮಾರಂಭದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ, ಬಿಜೆಪಿ ಮುಖಂಡ ಅಣ್ಣಾಮಲೈ ಭಾಗವಹಿಸಿದ್ದರು.

ವಿಮಾನ ಕ್ಯಾನ್ಸಲ್‌ ಬಿಸಿ

ಅಣ್ಣಾಮಲೈ ಅವರು ಚೆನ್ನೈನಿಂದ ಶಿವಮೊಗ್ಗಕ್ಕೆ ನೇರವಾಗಿ ವಿಮಾನದಲ್ಲಿ ಆಗಮಿಸಬೇಕಿತ್ತು. ಆದರೆ ಸ್ಪೈಸ್‌ ಜೆಟ್‌ ವಿಮಾನ ರದ್ದಾಗಿದ್ದರಿಂದ ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ವಿಮಾನದಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಅದೇ ವಿಮಾನದಲ್ಲಿ ಪುನಃ ಬೆಂಗಳೂರಿಗೆ ಮರಳಬೇಕಿತ್ತು. ಹಾಗಾಗಿ ತರಾತುರಿಯಲ್ಲಿ ಆಗಮಿಸಿ ಮರಳಿದರು.

Annamali-in-Shimoga-Mallesh-Convetion-Hall

‘ಮತ್ತೆ ಬರ್ತಿನಿ, ಮಾತಾಡ್ತೀನಿʼ

ಇನ್ನು, ತಮಿಳುನಾಡು ಬಿಜೆಪಿಯೊಳಗಿನ ಸಂಘರ್ಷ, ಇತ್ತೀಚೆಗೆ ಅಣ್ಣಾಮಲೈ ನೀಡಿದ್ದ ಹೇಳಿಕೆ ಸಂಬಂಧ ಮಾಧ್ಯಮಗಳು ಪ್ರಶ್ನಿಸಿದಾಗ, ‘10ನೇ ತಾರೀಖಿನ ನಂತರ ಪುನಃ ಬರುತ್ತೇನೆ. ಆಗ ಮಾತನಾಡುತ್ತೇನೆ’ ಎಂದು ತಿಳಿಸಿದರು.

Kalleshwara-Enterprises.webp

ಇಲ್ಲಿದೆ ವಿಡಿಯೋ

Cancel

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment