ಸಾಗರ, ಹೊಸನಗರದ 10,377 ಎಕರೆ ಮಂಜೂರಾತಿ ರದ್ದುಪಡಿಸಿ ಅರಣ್ಯಕ್ಕೆ ಸೇರ್ಪಡೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಾಗರ ಮತ್ತು ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ ಕೆಪಿಸಿಗೆ ಮಂಜೂರಾಗಿರುವ ಅರಣ್ಯ ಪ್ರದೇಶಗಳ ಮಂಜೂರಾತಿ ರದ್ದುಪಡಿಸಿ ಅರಣ್ಯಕ್ಕೆ (Forest) ಸೇರ್ಪಡೆ ಮಾಡುವಂತೆ ಜನಸಂಗ್ರಾಮ ಪರಿಷತ್ ಸಂಚಾಲಕ ಗಿರೀಶ್ ಆಚಾ‌ರ್ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಈ ಬಗ್ಗೆ ಮನವಿ ಸಲ್ಲಿಸಿ, 1984ರಲ್ಲಿ ಸಾಗರ ಉಪವಿಭಾಗಾಧಿಕಾರಿಗಳ ಆದೇಶದಂತೆ ಎರಡೂ ತಾಲೂಕುಗಳ ವ್ಯಾಪ್ತಿಯಲ್ಲಿ 10,377 ಎಕರೆ ಅಧಿಸೂಚಿತ ಅರಣ್ಯ ಭೂಮಿಯನ್ನು ಕರ್ನಾಟಕ ವಿದ್ಯುತ್‌ ನಿಗಮಕ್ಕೆ ಮಂಜೂರು ಮಾಡಲಾಗಿದೆ. ಅಧಿಸೂಚಿತ ಅರಣ್ಯ ಪ್ರದೇಶವನ್ನು ವರ್ಗಾವಣೆ ಮಾಡುವ ಮುನ್ನ ಅರಣ್ಯ ಸಂರಕ್ಷಣಾ ಕಾಯಿದೆ ಅನ್ವಯ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿದೆ.

girish acharಈ ನಿಯಮ ಪಾಲಿಸದೇ ಅಂದಿನ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ಕೆಪಿಸಿಗೆ ಭೂಪ್ರದೇಶದ ಹಕ್ಕನ್ನು ವರ್ಗಾಯಿಸಿದ್ದಾರೆ. ಇದು ಕಾನೂನಿನ ಉಲ್ಲಂಘನೆ. ಕೂಡಲೇ ಈ ಅಕ್ರಮ ಮಂಜೂರಾತಿ ರದ್ದುಗೊಳಿಸಿ ಸದರಿ ಭೂ ಪ್ರದೇಶವನ್ನು ಅರಣ್ಯ ಪ್ರದೇಶ ಎಂದು ಪರಿಗಣಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ » ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ

Forest

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2025

Leave a Comment