ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರೋಟರಿ (Rotary) ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ನೇತೃತ್ವದಲ್ಲಿ ನಗರದ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ ಕ್ಲಬ್ನಲ್ಲಿ ನ.8, 9ರಂದು ರೋಟರಿ ದತ್ತಿನಿಧಿ ಮತ್ತು ಪೋಲಿಯೊ ಪ್ಲಸ್ ಕುರಿತ ‘ಸಮೃದ್ಧಿ 2025 ಕಾರ್ಯಾಗಾರ’ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಅಧ್ಯಕ್ಷ ಚಂದ್ರಹಾಸ್ ಪಿ.ರಾಯ್ಕರ್ ತಿಳಿಸಿದರು.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಜಿಲ್ಲೆ 3182ರ ವ್ಯಾಪ್ತಿಯ ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳನ್ನು ಸೇರಿಸಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾಲ್ಕು ಜಿಲ್ಲೆಗಳಿಂದ 700ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ನ. 8ರಂದು ಸಂಜೆ 5.30ಕ್ಕೆ ನಿಯೋಜಿತ ಜಿಲ್ಲಾ ಗವರ್ನರ್ ರವಿಶಂಕರ್ ದಾಕೋಜು ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಸಾಂಬಶಿವ ರಾವ್ ಪತಿಬಂದ್ಲ, ರಾಜಾರಾಮ್ ಭಟ್, ಡಿ.ಎಸ್.ರವಿ, ಬಿ.ಎನ್. ರಮೇಶ್, ಬಿ.ಎಂ.ಭಟ್, ವಸಂತ್ ಹೋಬಳಿದಾರ್, ಕೆ.ಪಿ.ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ನ. 9ರಂದು ಬೆಳಗ್ಗೆ 9.30ರಿಂದ ಐದು ವಿವಿಧ ವಿಷಯಗಳ ಕುರಿತು ವಿನಯ್ ಕುಮಾರ್ ಪೈ, ಕೆ.ಕೃಷ್ಣ ಶೆಟ್ಟಿ, ಕಾಶಿನಾಥ್ ಪ್ರಭು, ಡಾ. ಆರ್. ಎಸ್.ನಾಗಾರ್ಜುನ ಮತ್ತು ಡಾ. ಪಿ.ನಾರಾಯಣ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 1ಕ್ಕೆ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ರೋಟರಿ ದತ್ತಿನಿಧಿ ಮೂಲಕ ವಿಶ್ವಾದ್ಯಂತ ಆರೋಗ್ಯ, ಶಿಕ್ಷಣ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಪೋಲಿಯೊ ನಿರ್ಮೂಲನೆಗೆ 1.3 ಬಿಲಿಯನ್ ಡಾಲರ್ ವಿನಿಯೋಗಿಸಿದೆ.
- ವಸಂತ್ ಹೋಬಳಿದಾರ್, ನಿಯೋಜಿತ ಜಿಲ್ಲಾ ಗವರ್ನರ್
![]()
ಡಾ. ಗುಡದಪ್ಪ ಕಸಬಿ, ಜಿ. ವಿಜಯ ಕುಮಾರ್, ಡಿ.ಕಿಶೋರ್ ಕುಮಾರ್, ಡಾ. ಧನಂಜಯ ರಾಂಪುರ, ಡಿ.ಎಂ.ಜಲೇಂದ್ರ, ಜೆ. ರಾಧಾಕೃಷ್ಣ, ಲಕ್ಷ್ಮಣ್ ಬಾಬು ಮತ್ತಿತರರಿದ್ದರು.
ಇದನ್ನೂ ಓದಿ » ಭದ್ರಾವತಿ ಡಿವೈಎಸ್ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್ ಅಧಿಕಾರಿ
Rotary
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





