ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ ಬಂಧನಕ್ಕೆ ಒತ್ತಾಯ, ಕಾರಣವೇನು?

ಶಿವಮೊಗ್ಗ: ‘ಜನಗಣಮನ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ’ ಎಂದು ಹೇಳಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಹಾಗೂ ಸಂಸದ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಸಂಘಟನೆ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯದ ಶಿಕ್ಷಣ ಸಚಿವರಾಗಿದ್ದವರು. ವಿಧಾನಸಭೆಯ ಸ್ಪೀಕರ್ ಹುದ್ದೆಯಂತಹ ಸಾಂವಿಧಾನಿಕ ಹುದ್ದೆ ನಿಭಾಯಿಸಿದ್ದವರು. ಆದರೆ, ಸಂಸದರಾಗಿ ಜನರಲ್ಲಿ ರಾಷ್ಟ್ರಗೀತೆ, ಸಂವಿಧಾನಗಳ ಬಗ್ಗೆ ಅಗೌರವ ಮೂಡಿಸುವಂತಹ ಮಾತುಗಳನ್ನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ದೇಶದ ಜನತೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

NSUI-Protest-against-vishweshwara-hegde-kageri-in-shimoga

ಈ ಸಂದರ್ಭದಲ್ಲಿ ರಾಜ್ಯ ಜವಳಿ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಚೇತನ್, ಯುವ ಮುಖಂಡ ಮಧುಸೂದನ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಡ್ಡು, ಎನ್ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ನಗರ ಅಧ್ಯಕ್ಷ ರವಿಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ಭಾಗಿಯಾಗಿದ್ದರು.

ಇದನ್ನೂ ಓದಿ » ಹೊಸನಗರದಲ್ಲಿ ಯುವಕನನ್ನು ವಶಕ್ಕೆ ಪಡೆದ ಪೊಲೀಸರು, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್

Leave a Comment