ಸವಳಂಗ ರಸ್ತೆಯಲ್ಲಿ ಕೊಮ್ಮನಾಳು ವ್ಯಕ್ತಿಯ ಬಲಿ ಪಡೆದ ಅಪರಿಚಿತ ವಾಹನ, ಹೇಗಾಯ್ತು ಘಟನೆ?

ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ (ACCIDENT) ತೀವ್ರ ಗಾಯಗೊಂಡಿದ್ದ ಬೈಕ್‌ ಸವಾರ ಸಾವನ್ನಪ್ಪಿದ್ದಾರೆ. ಶಿವಮೊಗ್ಗ – ಸವಳಂಗ ಮುಖ್ಯ ರಸ್ತೆಯಲ್ಲಿ ಖಾಸಗಿ ಶಾಲೆ ಮುಂಭಾಗ ಘಟನೆ ಸಂಭವಿಸಿದೆ. ಕೊಮ್ಮನಾಳು ಗ್ರಾಮದ ಮಂಜುನಾಥ್‌ (40) ಮೃತಪಟ್ಟಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಂಜುನಾಥ್‌ ತಮ್ಮ ಮನೆಯಿಂದ ಬೈಕಿನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಂಜುನಾಥ್‌ ತಲೆ, ಭುಜು, ಹೊಟ್ಟೆ ಸೇರಿದಂತೆ ವಿವಿಧೆಡೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ವೇಳೆಗಾಗಲೇ ಅವರು ಅಸುನೀಗಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ನಾಟಕೋತ್ಸವಕ್ಕೆ ಚಾಲನೆ, ಹೇಗಿತ್ತು ಮಾಯಾ ದ್ವೀಪ? ಇವತ್ತು ಯಾವ ನಾಟಕ ಇರಲಿದೆ?

 

Leave a Comment