ಡಿಸಿ ಕಚೇರಿ ಮುಂದೆ PUC ಉಪನ್ಯಾಸಕ ಹೋರಾಟ, ಸಾಲು ಸಾಲು ಬೇಡಿಕೆ ಈಡೇರಿಕೆಗೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಲ್ಲದ ಆದೇಶಗಳು ಸರ್ಕಾರದಿಂದ ಬರುತ್ತಿವೆ. ಇದರಿಂದ ಉಪನ್ಯಾಸಕರ ದೈನಂದಿನ ಕೆಲಸದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಜೊತೆಗೆ ಅವರ ಆತ್ಮಸ್ಥೆರ್ಯ ಕುಗ್ಗಿಸುತ್ತಿದೆ ಎಂದು ಆರೋಪಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ (Lecturers) ಸಂಘದಿಂದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ದೇಶದಲ್ಲಿ ಮಾದರಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಈಗ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇತ್ತೀಚೆಗೆ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧವೇ ಇಲ್ಲದ ಡಯೆಟ್‌ನ ಪ್ರಶಿಕ್ಷಣಾರ್ಥಿಗಳನ್ನು ಪದವಿಪೂರ್ವ ಕಾಲೇಜುಗಳ ಸ್ಥಿತಿಗತಿಯ ದತ್ತಾಂಶ ಕ್ರೋಢೀಕರಿಸಲು ಕಳುಹಿಸಲಾಗುತ್ತಿದೆ. ಅದು ಖಂಡನೀಯ ಎಂದರು.

ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಉಪನಿರ್ದೇಶಕರ ಕಚೇರಿ ಬಲವರ್ಧನೆಗೊಳಿಸಲು ಇಬ್ಬರು ಹಿರಿಯ ಪ್ರಾಂಶುಪಾಲರನ್ನು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ನಿಯೋಜಿಸಬೇಕು. ಉನ್ನತ ಶಿಕ್ಷಣ ಇಲಾಖೆಯಲ್ಲಿ ಇರುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲೂ ಪರೀಕ್ಷೆ ಮತ್ತು ಶೈಕ್ಷಣಿಕ ಸುಧಾರಣೆ ಗಳನ್ನು ತರಲು ಅಕಾಡೆಮಿಕ್ ಕೌನ್ಸಿಲ್ ರಚಿಸಬೇಕು. ಕೆಪಿಎಸ್ ಶಾಲೆಗಳ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಹಾರದ ಸಂಪೂರ್ಣ ಅಧಿಕಾರ ಹಾಗೂ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲರಿಗೆ ನೀಡಬೇಕು.

PUC-Lecturers-protest-in-Front-of-DC-Office

ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಚಿಕಿತ್ಸೆಯನ್ನು ಅನುದಾನಿತ ಕಾಲೇಜಿನ ಉಪನ್ಯಾಸಕರಿಗೆ ಮತ್ತು ಬೋಧಕೇತರ ವರ್ಗಕ್ಕೆ ನೀಡಬೇಕು. ಉಪನ್ಯಾಸಕರಿಗೆ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಯೋಗೀಶ್, ಗೌರವಾಧ್ಯಕ್ಷ ಜಿ. ಪರಮೇಶ್ವರಪ್ಪ, ಕಾರ್ಯದರ್ಶಿ ಮೊಹಮ್ಮದ್ ನಜಹತ್ ಉಲ್ಲಾ, ಉಪಾಧ್ಯಕ್ಷ ಹಾಲಪ್ಪ ಎಂ.ಸಂಕೂರು, ರಾಜ್ಯ ಸಂಘದ ಪ್ರತಿನಿಧಿ ಗುಡ್ಡಪ್ಪ ಎಫ್. ಕುಟ್ರಿ ಇದ್ದರು.

ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2025

Leave a Comment