ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: VISL ಕಾರ್ಖಾನೆ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ಅನೂಪ್ ಕುಮಾರ್ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಅವರು ಅಧಿಕಾರ ವರ್ಗಾಯಿಸಿದರು. ನಂತರ ಕಾರ್ಖಾನೆ ಆಡಳಿತ ಮಂಡಳಿ ಆವರಣ ದಲ್ಲಿರುವ ಸರ್.ಎಂ.ವಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಅನೂಪ್ ಕುಮಾರ್ ಅವರು ಬಿಎಸ್ಸಿ ಎಂಜಿನಿಯರಿಂಗ್ (ಲೋಹಶಾಸ್ತ್ರ) ಪದವೀಧರರಾಗಿದ್ದು, ಇಂದೋರ್ನಲ್ಲಿ ಮ್ಯಾನೇಜ್ಮೆಂಟ್ನಲ್ಲಿ ಸ್ನಾತಕೋತ್ತರ ಪ್ರಮಾಣಪತ್ರ ಪಡೆದಿದ್ದಾರೆ. ಪಶ್ಚಿಮ ಬಂಗಾಳದ ಬರ್ನ್ಪುರದಲ್ಲಿರುವ ಇಸ್ಕೋ ಸ್ಟೀಲ್ ಪ್ಲಾಂಟ್ನಲ್ಲಿ ಮ್ಯಾನೇಜ್ಮೆಂಟ್ ಟ್ರೈನಿಯಾಗಿ, 2017ರಲ್ಲಿ ಜನರಲ್ ಮ್ಯಾನೇಜರ್ ಮತ್ತು 2022ರಲ್ಲಿ ಕಾರ್ಯಪಾಲಕ ನಿರ್ದೇಶಕ (ಕೊಲಿಯರೀಸ್) ಹುದ್ದೆಗೆ ಭಾಜನರಾಗಿದ್ದಾರೆ.

ಬ್ಲಾಸ್ಟ್ ಫರ್ನೇಸ್ನಲ್ಲಿ 17 ವರ್ಷಗಳ ಪರಿಣತಿ ಹೊಂದಿದ್ದಾರೆ. ಕಳೆದ 34 ವರ್ಷಗಳಲ್ಲಿ ಅವರು ಸೈಲ್ -ಐಎಸ್ಪಿ ಬರ್ನ್ಪುರ, ಬಿಎಸ್ಎಲ್, ಬೊಕಾರೋ, ಕೊಲಿಯರೀಸ್ ವಿಭಾಗ ಮತ್ತು ಸೈಲ್ ಸುರಕ್ಷತಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಇದನ್ನೂ ಓದಿ » ಸಹ್ಯಾದ್ರಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ, ದಿನಾಂಕ ಪ್ರಕಟ, ಯಾವಾಗ? ಎಲ್ಲಿ?
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















