ಅಡ್ಡಗಟ್ಟಿ ಚಿನ್ನ, ನಗದು ಕಸಿದವನು ಅರೆಸ್ಟ್‌, ರಂಗೋಲೆ ಹಾಕುತ್ತಿದ್ದ ಮಹಿಳೆ ಸರ ಕಿತ್ತುಕೊಂಡವನು ಜೈಲಿಗೆ

ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ವಿನೋಬನಗರ ಠಾಣೆ ಪೊಲೀಸರು ಇಬ್ಬರು ಕಳ್ಳರನ್ನು ಅರೆಸ್ಟ್‌ ಮಾಡಿ, ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ 1

ನವುಲೆಯ ಶಿವಬಸವ ನಗರ ಕ್ರಾಸ್‌ ಬಳಿ ಅಕ್ಟೋಬರ್‌ 10ರಂದು ಬೆಳಗಿನ ಜಾವ 4 ಗಂಟೆಗೆ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಅಡ್ಡಗಟ್ಟಿದ್ದ. ಉಂಗುರ, ನಗದು ಕಸಿದುಕೊಂಡು ವ್ಯಕ್ತಿಯನ್ನ ತಳ್ಳಿ ಪರಾರಿಯಾಗಿದ್ದ.

ಈ ಪ್ರಕರಣ ಸಂಬಂಧ ಸಚಿನ್‌ ಅಲಿಯಾಸ್‌ ಶ್ಯಾಡೋ (27) ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ₹55,000 ಮೌಲ್ಯದ  7.90 ಗ್ರಾಂ ತೂಕದ ಬಂಗಾರದ ಸರ, ₹55,000 ನಗದು, ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್‌ ವಶಕ್ಕೆ ಪಡೆದಿದ್ದಾರೆ.

ಪ್ರಕರಣ 2

ಆಲ್ಕೊಳದ ಮಂಗಳ ಮಂದಿರ ಸಮೀಪ ಬೆಳಗ್ಗೆ ಮನೆ ಮುಂದೆ ರಂಗೋಲೆ ಹಾಕುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದುಕೊಂಡು ಕಳ್ಳನೊಬ್ಬ ಪರಾರಿಯಾಗಿದ್ದ.

ಆರೋಪಿ ಭುವನೇಶ್ವರ ಅಲಿಯಾಸ್‌ ಭುವನ (26) ಎಂಬಾತನನ್ನು ಬಂಧಿಸಿದ್ದು, ಆತನಿಂದ ₹1.30 ಲಕ್ಷ ಮೌಲ್ಯದ 13 ಗ್ರಾಂ ತೂಕದ ಬಂಗಾರದ ಸರ, ಗುಂಡುಗಳು, ಕೃತ್ಯಕ್ಕೆ ಬಳಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ » ರಿಂಗ್‌ ರಸ್ತೆಯಲ್ಲಿ ಓಡಾಡುವಾಗ ಹುಷಾರ್‌, ಬೈಕಿನಲ್ಲಿ ತೆರಳಿದ್ದ ಯುವಕ, ಯುವತಿಯಿಂದ ಕೇಸ್‌ ದಾಖಲು

ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಡಿ.ಕೆ ಉಸ್ತುವಾರಿಯಲ್ಲಿ ಪಿಎಸ್‌ಐ ತಿರುಮಲೇಶ್‌.ಜಿ, ಸಿಬ್ಬಂದಿ ರಾಜು, ಮನುಶಂಕರ್‌, ಮಲ್ಲಪ್ಪ.ಎಸ್‌.ಜಿ, ಅರುಣ ಕುಮಾರ್‌ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.  

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 14, 2025 at 6:20 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 14, 2025

Leave a Comment