ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಯುವನಿಧಿ ಯೋಜನೆ ಅಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಇನ್ಮುಂದೆ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಇಲ್ಲವಾದಲ್ಲಿ ನೇರ ನಗದು ಖಾತೆಗೆ ಜಮೆ ಆಗುವುದಿಲ್ಲ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆ ಮೂಲಕ ಯುವನಿಧಿ ಯೋಜನೆ ಅಡಿ ಪ್ರತಿ ನಿರುದ್ಯೋಗಿ ಭತ್ಯೆ ನೀಡಲಾಗುತ್ತಿದೆ. ಪದವಿಧರರಿಗೆ ₹3000 ಮತ್ತು ಡಿಪ್ಲೋಮಾ ಪದವೀದರರಿಗೆ ₹1500 ಹಣ ಖಾತೆಗೆ ನೇರ ನಗದು ಮೂಲಕ ವರ್ಗವಾಗುತ್ತಿದೆ.
ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್ ಮಾಹಿತಿ
ಈವರೆಗು ಶಿವಮೊಗ್ಗ ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕವಾಗಿ ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿದ್ದರು. ಇನ್ಮುಂದೆ ಪ್ರತಿ ತಿಂಗಳು 25ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ಗೆ ಲಾಗಿನ್ ಆಗಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂರವಾಣಿ ಸಂಖ್ಯೆ 9901914601 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುದ್ದಾರೆ.
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು






