ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ತೀರ್ಥಹಳ್ಳಿ: ಪದವಿ ವಿದ್ಯಾರ್ಥಿನಿಯೊಬ್ಬರು ಮನೆ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ದಬ್ಬಣಗದ್ದೆ ಸಮೀಪದ ಬಚ್ಚನಕೊಡಿಗೆ ಘಟನೆ ಸಂಭವಿಸಿದೆ.

ರಮೇಶ್‌ ಆಚಾರ ಅವರ ಪುತ್ರಿ ಪ್ರಾಪ್ತಿ (21) ಮೃತಳು. ಇಂದು ಬೆಳಗಿನ ಜಾವ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಾಪ್ತಿ ಪತ್ತೆಯಾಗಿದ್ದಾಳೆ. ಬಾಳೆಬೈಲಿನ ಪದವಿ ಕಾಲೇಜಿನಲ್ಲಿ ಪ್ರಾಪ್ತಿ ತೃತೀಯ ವರ್ಷದ ಬಿಬಿಎ ಪದವಿ ಓದುತ್ತಿದ್ದರು.

ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 14, 2025 at 8:54 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 14, 2025

Leave a Comment