| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಕೇಂದ್ರ ಕಾರಾಗೃಹದ ಕ್ಯಾಂಟೀನ್ಗೆ ತಂದಿದ್ದ ಬಾಳೆಗೊನೆಗಳಲ್ಲಿ ಗಾಂಜಾ, ಸಿಗರೇಟ್ಗಳು ಪತ್ತೆಯಾಗಿವೆ. ಜೈಲು ಭದ್ರತೆ ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಿಬ್ಬಂದಿ ಇದನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನ.19ರಂದು ಮಧ್ಯಾಹ್ನ 2.15ರ ಹೊತ್ತೆಗೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಟೋ ಒಂದರಲ್ಲಿ ಐದು ಬಾಳೆಗೊನೆ ತರಲಾಗಿತ್ತು. ಕ್ಯಾಂಟೀನ್ನವರ ಸೂಚನೆ ಮೇರೆಗೆ ಇವುಗಳನ್ನು ತರಲಾಗಿದೆ ಎಂದು ಗೇಟ್ ಮುಂಭಾಗ ಇರಿಸಲಾಗಿತ್ತು.
ಕೆಎಸ್ಐಎಸ್ಎಫ್ ಇನ್ಸ್ಪೆಕ್ಟರ್ ಜಗದೀಶ್, ಪಿಎಸ್ಐ ಪ್ರಭು, ಸಿಬ್ಬಂದಿ ಪ್ರವೀಣ್ ಮತ್ತು ನಿರೂಪಬಾಯಿ, ಐದು ಬಾಳೆಗೊನೆಗಳನ್ನು ಪರಿಶೀಲಿಸಿದರು. ಆಗ ಬಾಳೆಗೊನೆಯ ದಿಂಡು ಕೊರೆದು ಅದರೊಳಗೆ ಗಾಂಜಾ ಮತ್ತು ಸಿಗರೇಟುಗಳನ್ನು ಟೇಪ್ ಸುತ್ತಿ ಇಟ್ಟಿರುವುದು ಗೊತ್ತಾಗಿದೆ.
ಇದನ್ನೂ ಓದಿ » ಒಳ ಉಡುಪಿನಲ್ಲಿ ಗಾಂಜಾ ತಂದ ಅಧಿಕಾರಿ, ಸಿಕ್ಕಿಬಿದ್ದಿದ್ದು ಹೇಗೆ?
ಬಾಳೆ ದಿಂಡಿನಲ್ಲಿ 123 ಗ್ರಾಂ ಗಾಂಜಾ, 40 ಸಿಗರೇಟುಗಳು ಸಿಕ್ಕಿವೆ ಎಂದು ಆರೋಪಿಸಾಗಿದೆ. ಘಟನೆ ಸಂಬಂಧ ಜೈಲು ಮುಖ್ಯ ಅಧೀಕ್ಷಕ ಡಾ. ರಂಗನಾಥ್ ದೂರು ನೀಡಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನೆಹರು ಕ್ರೀಡಾಂಗಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ, ಪೊಲೀಸರಿಂದ ಪರಿಶೀಲನೆ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()