ವಿದ್ಯಾನಗರ ರಸ್ತೆ ಡೇಂಜರ್‌, ಇನ್ನಷ್ಟು ಜೀವ ಹೋಗುತ್ತೆ ಹುಷಾರ್‌, ಇಲ್ಲಿ ಏನೇನೆಲ್ಲ ಸಮಸ್ಯೆ ಇದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿದ್ಯಾನಗರದಲ್ಲಿ ಹಾದು ಹೋಗಿರುವ ಬಿ.ಹೆಚ್.ರಸ್ತೆ ದಿನೇದಿನೆ ಡೇಂಜರಸ್‌ ಆಗಿ ರೂಪುಗೊಳ್ಳುತ್ತಿದೆ. ಈ ಡಬಲ್‌ ರೋಡ್‌ನಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗಬೇಕಾಗಿದೆ.

» ಘಟನೆ 1

ನವೆಂಬರ್‌ 11: ಬೈಕ್‌ನಲ್ಲಿ ತೆರಳುತ್ತಿದ್ದ ಮಣಿಕಂಠ (22) ಎಂಬುವವರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಣಿಕಂಠ ಸಾವನ್ನಪ್ಪಿದ್ದಾರೆ. ವಿದ್ಯಾನಗರದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆ ಎದುರಿಗೆ ಘಟನೆ ಸಂಭವಿಸಿದೆ.

» ಘಟನೆ 2

ಅಕ್ಟೋಬರ್‌ 9: ಎಸ್‌ಬಿಐ ಬ್ಯಾಂಕ್‌ ಬಳಿ ರಸ್ತೆ ದಾಟುತ್ತಿದ್ದ ನಾಗರಾಜು (40) ಎಂಬುವವರಿಗೆ ಹೊಳೆ ಬಸ್‌ ನಿಲ್ದಾಣದ ಕಡೆಯಿಂದ ವೇಗವಾಗಿ ಬಂದ ಕೆಟಿಎಂ ಬೈಕ್‌ ಡಿಕ್ಕಿ ಹೊಡೆದಿದೆ. ನಾಗರಾಜು ಅವರ ಎಡ ಮೊಣಕಾಲಿನ ಮೂಳೆ ಮುರಿದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

» ಘಟನೆ 3

ಸೆಪ್ಟೆಂಬರ್‌ 9: ರಾತ್ರಿ 11.40ರ ಹೊತ್ತಿಗೆ ಎಂಆರ್‌ಎಸ್‌ ಕಡೆಗೆ ತೆರಳುತ್ತಿದ್ದ ಪುನಿತ್‌ (31) ಅವರ ಬೈಕ್‌ಗೆ ಎದುರಿನಿಂದ ರಾಂಗ್‌ ಸೈಡ್‌ನಲ್ಲಿ ಬಂದ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪುನಿತ್‌ ಗಾಯಗೊಂಡಿದ್ದು, ಬೈಕ್‌ ಕೂಡ ಹಾನಿಯಾಗಿತ್ತು.

vidyanagara-road-traffic-issue

ಇವು ಕಳೆದ ಮೂರು ತಿಂಗಳಲ್ಲಿ ಸಂಚಾರ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳು. ಎಂಆರ್‌ಎಸ್‌ ಸರ್ಕಲ್‌ನಿಂದ ತುಂಗಾ ಸೇತುವೆವರೆಗಿನ ಡಬಲ್‌ ರೋಡ್‌ ನಿತ್ಯ ಒಂದಿಲ್ಲೊಂದು ಅಪಘಾತಕ್ಕೆ ಸಾಕ್ಷಿಯಾಗುತ್ತಿದೆ. ಅದರಲ್ಲಿ ಬೆರಳೆಣಿಕೆ ಘಟನೆಗಳು ಮಾತ್ರ ಎಫ್‌ಐಆರ್‌ ಹಂತಕ್ಕೆ ತಲುಪುತ್ತಿವೆ.

ಡಬಲ್‌ ರೋಡ್‌ನಲ್ಲಿ ಏನೇನೆಲ್ಲ ಸಮಸ್ಯೆ ಇದೆ?

ಹೊಂಡ, ಗುಂಡಿಗಳದ್ದೇ ದರ್ಬಾರು: ಹೇಳುವುದಕ್ಕೆ ಇದು ರಾಷ್ಟ್ರೀಯ ಹೆದ್ದಾರಿ. ಆದರೆ ಇಲ್ಲಿರುವ ಗುಂಡಿಯಲ್ಲಿ ಇಡೀ ಬ್ರಹ್ಮಾಂಡವೆ ಕಾಣುತ್ತದೆ. ಆಳ, ಅಗಲದ ವಿಚಾರಕ್ಕೆ ಬಂದರೆ ಇಲ್ಲಿರುವ ಗುಂಡಿಗಳು ಒಂದಕ್ಕೊಂದು ಸ್ಪರ್ಧೆಗೆ ಬಿದ್ದಂತೆ ಕಾಣುತ್ತದೆ. ಬಹುತೇಕ ಅಪಘಾತಕ್ಕೆ ಮೂಲ ಕಾರಣವೇ ಈ ಗುಂಡಿಗಳು.

ವೇಗಕ್ಕೆ ಬೇಕು ಬ್ರೇಕ್‌: ರಾಷ್ಟ್ರೀಯ ಹೆದ್ದಾರಿಯಾದರು ಈ ರಸ್ತೆ ಅಲ್ಲಲ್ಲಿ ಕಿರಿದಾಗಿದೆ. ವಿದ್ಯಾನಗರದಲ್ಲಿ ಹೆದ್ದಾರಿಗೆ ಹೊಂದಿಕೊಂಡು ಅಂಗಡಿಗಳು, ಹೊಟೇಲ್‌ಗಳು, ಮನೆಗಳಿವೆ. ಹಾಗಾಗಿ ಜನ ದಟ್ಟಣೆ ಹೆಚ್ಚು. ರಸ್ತೆ ಉದ್ದಕ್ಕು 40 ಕಿ.ಮೀ ವೇಗಮಿತಿ ಎಂಬ ಸೂಚನಾ ಫಲಕಗಳಿವೆ. ಆದರೆ ವಾಹನಗಳು ಇದನ್ನು ಪಾಲಿಸಿದ್ದನ್ನು ಕಂಡವರು ವಿರಳ.

v2

ಅಡ್ಡಾದಿಡ್ಡಿ ಪಾರ್ಕಿಂಗ್‌: ಕಿರಿದಾದ ರಸ್ತೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನದ್ದು ಮತ್ತೊಂದು ಸಮಸ್ಯೆ. ಕಾರುಗಳು, ದ್ವಿಚಕ್ರ ವಾಹನಗಳು ರಸ್ತೆಯ ಎರಡು ಬದಿ ಪಾರ್ಕಿಂಗ್‌ ಮಾಡಲಾಗುತ್ತಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಸದಾ ಅಡಚಣೆ ಉಂಟಾಗುತ್ತಿದೆ. ಕೆಲವೊಮ್ಮೆ ಅರ್ಧ ರಸ್ತೆವರೆಗು ವಾಹನಗಳನ್ನು ನಿಲ್ಲಿಸಲಾಗುತ್ತದೆ. ಸಣ್ಣಪುಟ್ಟ ಅಪಘಾತಕ್ಕೆ ಕಾರಣವಾಗುತ್ತಿವೆ.

v1

ರಾಂಗ್‌ ಸೈಡ್‌ ಡ್ರೈವಿಂಗ್‌: ಬಿ.ಹೆಚ್‌.ರಸ್ತೆಯಲ್ಲಿ ರಾಂಗ್‌ ಸೈಡ್‌ ಡ್ರೈವಿಂಗ್‌ ಸಾಮಾನ್ಯವೇನೋ ಅನ್ನುವಂತಾಗಿದೆ. ರಸ್ತೆ ಉದ್ದಕ್ಕು ಅಲ್ಲಲ್ಲಿ ಡಿವೈಡರ್‌ಗಳಿವೆ. ಆದರೆ ಡಿವೈಡರ್‌ಗಳವರೆಗೆ ಹೋಗಿ ತಿರುವು ಪಡೆಯುವ ಬದಲು, ಸಮೀಪದ ಡಿವೈಡರ್‌ನಲ್ಲೇ ವಾಹನ ತಿರುಗಿಸಿ ರಾಂಗ್‌ ಸೈಡ್‌ನಲ್ಲಿ ಹೋಗಿ ಸಮಯ ಮತ್ತು ಪೆಟ್ರೋಲ್‌ ಉಳಿತಾಯ ಮಾಡುವವರಿದ್ದಾರೆ..! ಸಹ್ಯಾದ್ರಿ ಕಾಲೇಜು ಮುಂಭಾಗ ಕೆಲವು ವಿದ್ಯಾರ್ಥಿಗಳು ಬೈಕುಗಳಲ್ಲಿ ಸದಾ ರಾಂಗ್‌ ಸೈಡ್‌ ತ್ರಿಬಲ್‌ ರೈಡಿಂಗ್‌ ಮಾಡುತ್ತಾರೆ. ಸಂಜೆ ವೇಳೆ ತಿನಿಸು ಅಂಡಿಗಳಿಗೆ ಬರುವವರಂತು ರಾಂಗ್‌ ಸೈಡ್‌ನಲ್ಲೆ ಓಡಾಡುತ್ತಾರೆ. ಈ ರಸ್ತೆಯಲ್ಲಿ ಅಲ್ಲಲ್ಲಿ ನಿಲ್ಲುವ ಸಂಚಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆಲವರು ರಾಂಗ್‌ ಸೈಡಿನಲ್ಲಿ ವಾಹನಗಳನ್ನು ನುಗ್ಗಿಸುತ್ತಾರೆ.

ರಸ್ತೆ ಉದ್ದಕ್ಕೂ ಸಿಸಿ ಕ್ಯಾಮರಾಗಳಿವೆ. ಅಲ್ಲಲ್ಲಿ ಸಂಚಾರ ಪೊಲೀಸರು ಓಡಾಡುತ್ತಿರುತ್ತಾರೆ. ಆದರೆ ಸಂಚಾರ ನಿಯಮ ಪಾಲನೆ ಸಮರ್ಪಕವಾಗಿಲ್ಲ. ನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಭಾರಿ ವಾಹನಗಳ ಓಡಾಟವು ಹೆಚ್ಚು. ಈಗಲೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಈ ರಸ್ತೆ ಮತ್ತಷ್ಟು ಅಪಘಾತ, ಮಣಿಕಂಠ ಅವರಂತೆ ಮತ್ತಷ್ಟು ಮಂದಿ ಜೀವ ಕಳೆದುಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್‌ ರೂಮಿನಲ್ಲಿ ಬೆಂಕಿ ಕೇಸ್‌, ಪುರುಷ, ಮಹಿಳೆ ವಿರುದ್ಧವೇ ಕೇಸ್‌, ಏನೇನಿದೆ ದೂರಿನಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 22, 2025

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment