ಇನ್ನೆಷ್ಟು ವರ್ಷ ಬೇಕು ಶಿವಮೊಗ್ಗದ ಈ ರಸ್ತೆಯಲ್ಲಿರುವ ಲೈಟ್‌ ಆನ್‌ ಆಗಲು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಈ ಬೀದಿ ದೀಪದ ಕೆಳಗೆ ಸದಾ ಕತ್ತಲು. ಯಾಕಂದರೆ ಇವು ಆನ್‌ ಆಗಿದ್ದೇ ಇಲ್ಲ. ಅಂಗಡಿ ಮುಂಗಟ್ಟುಗಳ ಮುಂದಿನ ಲೈಟ್‌ಗಳಿಂದಲೇ ಈ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸ್ವಲ್ಪ ಬೆಳಕು ಕಾಣಿಸುತ್ತದೆ. ‌

ಇಂತಹ ದುಸ್ಥಿತಿ ಇರುವುದು ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿ. ಹೆದ್ದಾರಿಯಾದರು ಹಲವು ತಿಂಗಳಿಂದ ಈ ಬೀದಿ ದೀಪಗಳು ಕಾರ್ಯನಿರ್ವಹಿಸಿಲ್ಲ. ಶಂಕರ ಮಠ ರಸ್ತೆಯ ಸುಪ್ರೀಂ ಬಜಾಜ್‌ ಶೋ ರೂಂ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಬೀದಿ ದೀಪ ಅಳವಡಿಸಲಾಗಿದೆ. ಅಲ್ಲಿಂದ ಶಂಕರಮಠ ಸರ್ಕಲ್‌ವರೆಗೆ 9 ಬೀದಿ ದೀಪಗಳ ಕಂಬಗಳನ್ನು ಹಾಕಲಾಗಿದೆ.

ಅಂಗಡಿಗಳ ಲೈಟ್‌ನಿಂದಲೇ ರಸ್ತೆಗೆ ಬೆಳಕು

ಶಂಕರ ಮಠ ರಸ್ತೆಯ ಒಂದು ಬದಿಯಲ್ಲಿ ಈ ಹೈಟೆಕ್‌ ಬೀದಿ ದೀಪಗಳಿವೆ. ಮತ್ತೊಂದು ಬದಿಯಲ್ಲಿ ವಿದ್ಯುತ್‌ ಕಂಬಗಳಲ್ಲಿ ಲೈಟ್‌ಗಳನ್ನು ಹಾಕಲಾಗಿದೆ. ಇವುಗಳಿಂದಾಗಿ ರಸ್ತೆಯ ಒಂದು ಬದಿಗೆ ಮಾತ್ರ ಬೆಳಕು ಕಾಣಲಿದೆ. ಆದರೆ ಮತ್ತೊಂದು ಬದಿಗೆ ಶೋ ರೂಂಗಳ ಲೈಟ್‌ಗಳೇ ಆಸರೆಯಾಗಿದೆ. ಶೋ ರೂಂಗಳು, ಅಂಗಡಿ ಮುಂಗಟ್ಟು ಬಂದ್‌ ಆದರೆ ರಸ್ತೆಯಲ್ಲಿ ಬೆಳಕಿನ ಕೊರತೆ ಉಂಟಾಗುತ್ತದೆ.

ರೈಲ್ವೆ ನಿಲ್ದಾಣಕ್ಕೆ ಇದು ಪ್ರಮುಖ ಸಂಪರ್ಕ ರಸ್ತೆ. ಇನ್ನು ಭದ್ರಾವತಿ ಕಡೆಯಿಂದ ಹೊನ್ನಾಳಿ, ದಾವಣಗೆರೆ ಕಡೆಗೆ ತೆರಳುವುದಕ್ಕು ಇದೇ ಮುಖ್ಯ ರಸ್ತೆ. ಹಾಗಾಗಿ ರಾತ್ರಿ ವೇಳೆಯು ಇಲ್ಲಿ ಜನ ಮತ್ತು ವಾಹನಗಳ ಸಂಚಾರ ಇರುತ್ತದೆ. ಇನ್ನೊಂದೆಡೆ ಇಲ್ಲಿರುವ ಡಿವೈಡರ್‌ ತಕ್ಷಣಕ್ಕೆ ವಾಹನ ಸವಾರರಿಗೆ ಗೊತ್ತಾಗುವುದಿಲ್ಲ. ಬೀದಿ ದೀಪ ಇದ್ದರೆ ಸಂಭಾವ್ಯ ಅಪಘಾತ ತಪ್ಪಲಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಬರ್ತಿದ್ದಾರೆ ಮಹಿಳಾ ಆಯೋಗದ ಅಧ್ಯಕ್ಷೆ, ಸಾಲು ಸಾಲು ಸಭೆ, ಸಮಾರಂಭದಲ್ಲಿ ಭಾಗಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment